ಬೆಂಗಳೂರಿನಲ್ಲಿ ಲಿವಿನ್ ರಿಲೇಷನ್‌ಶಿಪ್ ದುರಂತ – ಅನುಮಾನಕ್ಕೆ ಯುವತಿ ನೇಣು

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್‌ನಲ್ಲಿದ್ದ ಜೋಡಿಯ ಜಗಳ ದುರಂತ ಅಂತ್ಯ ಕಂಡ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ನಡೆದಿದೆ. ಮೇಘಾಲಯ ಮೂಲದ 34 ವರ್ಷದ ಅಗತ ಬೈತಿಯಂಗುಂ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅಗತ ಬೈತಿಯಂಗುಂ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ಮಣಿಪುರ ಮೂಲದ ನವಾಜ್ ಶರೀಫ್ (26) ಜೊತೆ ಕಳೆದ ಮೂರು ವರ್ಷಗಳಿಂದ ಲಿವಿನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇಬ್ಬರ ನಡುವೆ 8 ವರ್ಷಗಳ ವಯಸ್ಸಿನ ಅಂತರವಿದ್ದು,…

Read More

ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದ ಚಂದ್ರೇಗೌಡ ಎಂಬಾತ ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಆರೋಪಿ ಮಹಿಳೆಯರ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಸಂಗ್ರಹಿಸಿಕೊಂಡು, ಅವುಗಳನ್ನು ಬಳಸಿ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ. ಪೊಲೀಸ್ ಅಧಿಕಾರಿ, ವಕೀಲ ಹಾಗೂ ಮಾಧ್ಯಮ ಪ್ರತಿನಿಧಿ ಎಂದು ನಕಲಿ ಪರಿಚಯ ನೀಡಿ ಮಹಿಳೆಯರನ್ನು ಮೋಸಗೊಳಿಸುತ್ತಿದ್ದ ಎನ್ನಲಾಗಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬಳಿಗೆ “ನಿನ್ನನ್ನು ಮದುವೆಯಾಗುತ್ತೇನೆ” ಎಂದು…

Read More

ಬಿರುಗಾಳಿ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ಪರಿಹಾರಕ್ಕೆ ರೈತರ ಒತ್ತಾಯ

ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಅಕಾಲಿಕ ಭಾರೀ ಮಳೆ ಹಾಗೂ ಬಿರುಗಾಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಸಾವಿರಾರು ಬಾಳೆ ಗಿಡಗಳು ನೆಲಕಚ್ಚಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಲೋಕೇಶ್, ಪರಮೇಶ್ ಹಾಗೂ ನಾಗರಾಜ್ ಅವರಿಗೆ ಸೇರಿದ ಬಾಳೆ ತೋಟಗಳು ಸಂಪೂರ್ಣ ಹಾನಿಗೊಳಗಾಗಿವೆ. ಇನ್ನೂ ಒಂದು ತಿಂಗಳಲ್ಲಿ ಕಟಾವು ಮಾಡಬೇಕಿದ್ದ ಬಾಳೆಗೊನೆಗಳು ಮಳೆ ಮತ್ತು ಗಾಳಿಯ ಅಬ್ಬರಕ್ಕೆ ಮುರಿದು ಬಿದ್ದಿವೆ. ಇದರಿಂದ ರೈತರು ಭಾರೀ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇದೇ…

Read More

ವಾಣಿಜ್ಯ LPG ಸಿಲಿಂಡರ್ ಬೆಲೆ ಭಾರೀ ಏರಿಕೆ – ಬೆಂಗಳೂರಿನಲ್ಲಿ ₹3,152ಕ್ಕೆ ಏರಿದ ದರ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1ರಿಂದ ಹೊಸ ದರ ಜಾರಿಗೆ ಬಂದಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹993 ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಕಮರ್ಷಿಯಲ್ ಸಿಲಿಂಡರ್ ದರ ₹3,071.50ಕ್ಕೆ ಏರಿಕೆಯಾಗಿದೆ. ಬೆಂಗಳೂರುದಲ್ಲೂ ವಾಣಿಜ್ಯ ಗ್ಯಾಸ್ ದರದಲ್ಲಿ ₹991 ಏರಿಕೆಯಾಗಿದ್ದು, ಇಂದಿನಿಂದ ಒಂದು ಸಿಲಿಂಡರ್ ಬೆಲೆ ₹3,152 ಆಗಿದೆ. ಆದರೆ ಗೃಹ ಬಳಕೆಯ 14.2 ಕೆಜಿ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಜಾಗತಿಕ ಇಂಧನ ದರ ಏರಿಕೆ…

Read More

ಕೋಲ್ಕತ್ತಾದಲ್ಲಿ ಮಮತಾ ಹೈಡ್ರಾಮಾ – ಇವಿಎಂ ಟ್ಯಾಂಪರಿಂಗ್ ಆರೋಪಕ್ಕೆ ಆಯೋಗ ಸ್ಪಷ್ಟನೆ

ಕೋಲ್ಕತ್ತಾ: ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ ಪ್ರತಿಭಟನೆ ನಡೆಸಿದ ಘಟನೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ತಾವು ಸ್ಪರ್ಧಿಸಿರುವ ಭವಾನಿಪುರ ಕ್ಷೇತ್ರದ ಮತ ಎಣಿಕಾ ಕೇಂದ್ರವಾಗಿರುವ ಸಖಾವತ್ ಮೆಮೋರಿಯಲ್ ಸ್ಕೂಲ್‌ಗೆ ಮಮತಾ ಬ್ಯಾನರ್ಜಿ ಸ್ವತಃ ಭೇಟಿ ನೀಡಿ ಸುಮಾರು ನಾಲ್ಕು ಗಂಟೆಗಳ ಕಾಲ ಅಲ್ಲೇ ತಂಗಿದ್ದರು. ಈ ವೇಳೆ ಟಿಎಂಸಿ ಕಾರ್ಯಕರ್ತರು ಹಾಗೂ ನಾಯಕರು ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ…

Read More

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ ಅಮಾನತು, ಡಿಸಿ ನೇತೃತ್ವದಲ್ಲಿ ತನಿಖೆ

ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಕಾರ್ಯನಿರ್ವಹಕ ಅಭಿಯಂತರ ಆರ್‌.ಟಿ ರುದ್ರಮುನಿ ಹಾಗೂ ಕಾರ್ಯನಿರ್ವಹಕ ಅಭಿಯಂತರ ಮೊಹಮದ್ ಜಾವೇದ್ ವಿರುದ್ಧ ಕ್ರಮ ಜರುಗಿದೆ. ಘಟನೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ತನಿಖಾ ಸಮಿತಿಯಲ್ಲಿ ತಹಶೀಲ್ದಾರ್‌, ಪಿಡಬ್ಲ್ಯೂಡಿ ನಿವೃತ್ತ…

Read More

ಬೆಂಗಳೂರಿನಲ್ಲಿ ಮತ್ತೆ ಕಳ್ಳರ ಅಟ್ಟಹಾಸ – ಗೋಡೆ ಕೊರೆದು ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಗ್ಯಾಂಗ್

ಬೆಂಗಳೂರು ನಗರದಲ್ಲಿ ಮತ್ತೆ ಕಳ್ಳರ ಅಟ್ಟಹಾಸ ಮೆರೆದಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಗಗನಕ್ಕೇರಿರುವ ನಡುವೆಯೇ, ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನ ಎಂಬಿ ಜ್ಯುವೆಲ್ಲರ್ಸ್‌ನಲ್ಲಿ ಭಾರೀ ಕಳ್ಳತನ ನಡೆದಿದೆ. ಸುಮಾರು 1 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 70 ಕೆಜಿ ಬೆಳ್ಳಿ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳರು ಅತ್ಯಂತ ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದಾರೆ. ಮೊದಲು ಜ್ಯುವೆಲ್ಲರಿ ಅಂಗಡಿಯ ಹಿಂಭಾಗದ ಕೊಠಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ನಂತರ ಗೋಡೆಯನ್ನೇ ಕೊರೆದು ಅಂಗಡಿಯೊಳಗೆ…

Read More

ಭೀಮಾ-ಕ್ಯಾಪ್ಟನ್ ಮತ್ತೆ ಒಂದೇ ಜಾಗದಲ್ಲಿ ಪ್ರತ್ಯಕ್ಷ – ಬೇಲೂರಿನಲ್ಲಿ ಜನರಿಗೆ ಭೀತಿ

ಹಾಸನ: ಏಳು ತಿಂಗಳ ಹಿಂದೆ ಭೀಕರ ಕಾಳಗದಲ್ಲಿ ದಂತ ಕಳೆದುಕೊಂಡಿದ್ದ ಕಾಡಾನೆ ಭೀಮಾ ಇದೀಗ ಮತ್ತೆ ಕ್ಯಾಪ್ಟನ್ ಎದುರು ಕಾಳಗಕ್ಕೆ ಸಜ್ಜಾಗಿರುವಂತೆ ಕಾಣಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ ಭೀಮಾ ಹಾಗೂ ಕ್ಯಾಪ್ಟನ್ ಒಂದೇ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಎರಡೂ ಕಾಡಾನೆಗಳು ಮುಖಾಮುಖಿಯಾಗಿದ್ದರೂ, ಸುತ್ತಮುತ್ತ ಜನರು ಕಾಣಿಸಿಕೊಂಡ ಹಿನ್ನೆಲೆ ಕಾದಾಟ ನಡೆಸದೇ ಅಲ್ಲಿಂದ ಒಟ್ಟಿಗೆ ಸಾಗಿವೆ. ಆದರೆ ಆನೆಗಳ ವರ್ತನೆ ಗಮನಿಸಿದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ಕಳೆದ ವರ್ಷ…

Read More