ನಾವು ಅಧಿಕಾರಕ್ಕೆ ತಂದವರು” – ಕಾಂಗ್ರೆಸ್ ವಿರುದ್ಧ ಮುಸ್ಲಿಂ ಸಮುದಾಯ ಆಕ್ರೋಶ

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಧರ್ಮಗುರುಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಜೀರ್ ಅಹಮ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ವಜಾ ನಿರ್ಧಾರವನ್ನು ಖಂಡಿಸಿ ಮಂಡ್ಯದ ಜಾಮಿಯಾ ಮಸೀದಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಗುರು ಅಬ್ದುಲ್ ಖದೀರ್, “ಮುಸ್ಲಿಂ ಸಮುದಾಯ ಕಾಂಗ್ರೆಸ್‌ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದೆ. ಆದರೆ ಈಗ ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ” ಎಂದು ಆರೋಪಿಸಿದರು. “ನಾವು ಹಗಲಿರುಳು…

Read More

ಸಚಿವ ಸುಧಾಕರ್‌ಗೆ ಇನ್ನೂ ಪ್ರಜ್ಞೆ ಇಲ್ಲ: ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ವೆಂಟಿಲೇಟರ್‌ನಲ್ಲಿ ಇತರ ಅಂಗಾಂಗಗಳು ಸ್ಥಿರವಾಗಿದ್ದರೂ ಮೆದುಳು ಪ್ರತಿಕ್ರಿಯೆ ನೀಡುತ್ತಿಲ್ಲ. ನಾಳೆ ಸಿಟಿ ಸ್ಕ್ಯಾನ್ ನಂತರ ವೈದ್ಯರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ತಿಳಿಸಿದ್ದಾರೆ. ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗೆ ಮಣಿಪಾಲ್…

Read More

ಕಾನ್‌ಸ್ಟೆಬಲ್ ಪ್ರೇಯಸಿ ರೌದ್ರಾವತಾರ – ಪತ್ನಿ, ಮಗ ಹತ್ಯೆ, ಮಕ್ಕಳಿಗೆ ಗಂಭೀರ ಗಾಯ

ಛತ್ತೀಸಗಢದ ರಾಯ್ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ.25 ವರ್ಷದ ಮಹಿಳೆ, ತಾನು ಪ್ರೇಮ ಸಂಬಂಧ ಹೊಂದಿದ್ದ ಕಾನ್‌ಸ್ಟೆಬಲ್ ಮನೆಗೆ ನುಗ್ಗಿ ಆತನ ಪತ್ನಿ ಮತ್ತು ಮಕ್ಕಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾಳೆ. ಸರೋಜಿನಿ ಭಾರದ್ವಾಜ್ ಎಂಬ ಆರೋಪಿತೆ, ದುರ್ಗದಲ್ಲಿರುವ ಕಾನ್‌ಸ್ಟೆಬಲ್ ಲಲಿತೇಶ್ ಯಾದವ್ ಅವರ ಫ್ಲಾಟ್‌ಗೆ ಹೋಗಿದ್ದಳು.ಅಲ್ಲಿ ಪತ್ನಿ ರೀನಾ ಯಾದವ್ ಜೊತೆ ಜಗಳ ಆರಂಭವಾಗಿದ್ದು, ಏಕಾಏಕಿ ಚಾಕು ತೆಗೆದು ದಾಳಿ ನಡೆಸಿದ್ದಾಳೆ. ದಾಳಿಯಲ್ಲಿ ರೀನಾ ಯಾದವ್ ಹಾಗೂ 9 ವರ್ಷದ ಮಗ ಆದಿತ್ಯ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ…

Read More

ಕುಂದಾಪುರ ದೇವಸ್ಥಾನ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳವು ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಏಪ್ರಿಲ್ 20ರಂದು ಬೆಳಗ್ಗೆ ನಡೆದ ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ದೃಶ್ಯಗಳು ಗಮನಕ್ಕೆ ಬಂದಿದ್ದವು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ…

Read More

ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್: ಯುವ ಬ್ಯಾಟರ್ ಸಾಹಿಲ್ ಪರಾಖ್ ಆಸ್ಪತ್ರೆಗೆ ದಾಖಲು

IPL 2026 ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಆಘಾತ ಸಂಭವಿಸಿದೆ. ಅಭ್ಯಾಸದ ವೇಳೆ ಯುವ ಎಡಗೈ ಬ್ಯಾಟರ್ ಸಾಹಿಲ್ ಪರಾಖ್ ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ನೆಟ್ಸ್ ಅಭ್ಯಾಸದಲ್ಲಿ ಈ ಘಟನೆ ಸಂಭವಿಸಿದೆ. ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ವೇಗದ ಬೌಲರ್ ಎಸೆದ ಬೌನ್ಸರ್ ಚೆಂಡು ಸಾಹಿಲ್ ಪರಾಖ್ ಅವರ ಹೆಲ್ಮೆಟ್‌ನ ಗ್ರಿಲ್ ನಡುವಿನಿಂದ ನೇರವಾಗಿ ಮುಖಕ್ಕೆ ಬಡಿದಿದೆ ಎಂದು ವರದಿಯಾಗಿದೆ. ಚೆಂಡು ತಗುಲಿದ ತಕ್ಷಣವೇ ಸಾಹಿಲ್ ಮೈದಾನದಲ್ಲೇ ಕುಸಿದು…

Read More

ಪಾಕಿಸ್ತಾನಕ್ಕೆ ಅರಾಗ್ಚಿ ಭೇಟಿ – ಅಮೆರಿಕ ಜೊತೆ ನೇರ ಮಾತುಕತೆಗೆ ಇರಾನ್ ನಿರಾಕರಣೆ

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ನೇತೃತ್ವದ ನಿಯೋಗವು ಪಾಕಿಸ್ತಾನಕ್ಕೆ ಆಗಮಿಸಿದ್ದು, ಅಮೆರಿಕದೊಂದಿಗೆ ನೇರ ಮಾತುಕತೆ ಸಾಧ್ಯತೆಯನ್ನು ಇರಾನ್ ತಿರಸ್ಕರಿಸಿದೆ. ಹಾರ್ಮುಜ್ ಜಲಸಂಧಿ ಮತ್ತು ಕದನ ವಿರಾಮ ಸ್ಥಿರಗೊಳಿಸುವ ಬಗ್ಗೆ ನಡೆಯುತ್ತಿರುವ ಈ ರಾಜತಾಂತ್ರಿಕ ಪ್ರಕ್ರಿಯೆಯಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆಯ ಪಾತ್ರವಹಿಸಿದೆ. ಇಸ್ಲಾಮಾಬಾದ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಉನ್ನತ ಮಟ್ಟದ ಚರ್ಚೆಗಳು ಮುಂದುವರಿಯಲಿವೆ.

Read More

ಹಣ ಇಲ್ಲ, ಸಿಬ್ಬಂದಿ ಇಲ್ಲ – ಗ್ರೇಟರ್ ಬೆಂಗಳೂರು ಚುನಾವಣೆ ಮೇಲೆ ಅನುಮಾನ

ಬೆಂಗಳೂರು ನಗರ ಆಡಳಿತದಲ್ಲಿ ಮಹತ್ವದ ಬದಲಾವಣೆ ಬಳಿಕ ಕುತೂಹಲ ಕೆರಳಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಇದೀಗ ಅನಿಶ್ಚಿತತೆ ಆವರಿಸಿದೆ. ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿದ ಸ್ಪಷ್ಟ ಆದೇಶ ಇದ್ದರೂ, ಅದನ್ನು ಪಾಲಿಸುವುದು ಕಷ್ಟಸಾಧ್ಯ ಎಂದು ರಾಜ್ಯ ಚುನಾವಣಾ ಆಯೋಗ ನ್ಯಾಯಾಲಯದ ಗಮನಕ್ಕೆ ತಂದಿದೆ. ಚುನಾವಣೆ ನಡೆಸಲು ಅಗತ್ಯವಿರುವ ಹಣದ ಕೊರತೆ ಹಾಗೂ ಸಿಬ್ಬಂದಿ ಅಭಾವವೇ ಪ್ರಮುಖ ಸಮಸ್ಯೆಯಾಗಿದ್ದು, ಆಯೋಗವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಇದರ ಜೊತೆಗೆ, ರಾಜ್ಯದಲ್ಲಿ ನಡೆಯುತ್ತಿರುವ ಜನಗಣತಿ…

Read More

ಫೇಕ್ UPIಗೆ ಬ್ರೇಕ್: ಬಿಎಂಟಿಸಿ ಹೊಸ ಸ್ಮಾರ್ಟ್ ಇಟಿಎಂ ಲಾಂಚ್

ಬೆಂಗಳೂರು: ನಗರದ ಸಾರ್ವಜನಿಕ ಸಾರಿಗೆಗೆ ಜೀವನಾಡಿಯಾಗಿರುವ ಬಿಎಂಟಿಸಿ ಇದೀಗ ಟಿಕೆಟ್ ವಂಚನೆಗೆ ಕಡಿವಾಣ ಹಾಕಲು ಮಹತ್ವದ ಹೆಜ್ಜೆ ಇಟ್ಟಿದೆ. ಬಸ್‌ಗಳಲ್ಲಿ ಹೊಸ ಡೈನಾಮಿಕ್ ಕ್ಯೂಆರ್ ಕೋಡ್ ಆಧಾರಿತ ಇಟಿಎಂ (ETM) ಮಷೀನ್‌ಗಳನ್ನು ಪರಿಚಯಿಸಲು ಮುಂದಾಗಿದ್ದು, ಮುಂದಿನ ತಿಂಗಳಾಂತ್ಯಕ್ಕೆ ಎಲ್ಲಾ ಬಸ್‌ಗಳಲ್ಲಿ ಜಾರಿಗೆ ಬರಲಿದೆ. ಇತ್ತೀಚೆಗೆ ಬಿಎಂಟಿಸಿ ಬಸ್‌ಗಳಲ್ಲಿ ಕಂಡೆಕ್ಟರ್‌ಗಳು ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್ ಬಳಸಿಕೊಂಡು ಪ್ರಯಾಣಿಕರಿಂದ ಹಣ ಪಡೆದು ಟಿಕೆಟ್ ನೀಡದೆ ವಂಚನೆ ಮಾಡಿದ ಘಟನೆಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಇಂತಹ ಕಳ್ಳಾಟಕ್ಕೆ ಬ್ರೇಕ್…

Read More

ಕಾವೇರಿ ನದಿಯಲ್ಲಿ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮೇಕೆದಾಟು ಬಳಿ ಮಹಿಳೆಗೆ ಗಾಯ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ. ಕಾವೇರಿ ನದಿ ಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿದೆ. ಮೇಕೆದಾಟು ಸಮೀಪದ ಸಂಗಮ ಅರಣ್ಯ ಪ್ರದೇಶಕ್ಕೆ ನೀರು ಕುಡಿಯಲು ಬಂದಿದ್ದ ಕಾಡಾನೆ, ಏಕಾಏಕಿ ಅಲ್ಲಿದ್ದ ಪ್ರವಾಸಿಗರ ಮೇಲೆ ಎರಗಿದೆ. ಘಟನೆ ನೋಡಿದ ಪ್ರವಾಸಿಗರು ಭಯದಿಂದ ಎದ್ನೋಬಿದ್ನೋ ಓಡಿಹೋಗಿದ್ದಾರೆ. ಈ ಗದ್ದಲದ ನಡುವೆ ಒಬ್ಬ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಸ್ಥಳೀಯ…

Read More

ಮಂಗಳೂರು ಸಮೀಪ ಭಂಡಾರ ಮೆರವಣಿಗೆ ಅವಘಡ – ಪಲ್ಲಕ್ಕಿ ಉರುಳಿ 8 ಮಂದಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಕೊಂಡೊಯ್ಯುತ್ತಿದ್ದ ವೇಳೆ ಕಾಲು ಸಂಕ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಪಲ್ಲಕ್ಕಿ ಉರುಳಿ ಬಿದ್ದು, ಅದನ್ನು ಹೊತ್ತುಕೊಂಡು ಹೋಗುತ್ತಿದ್ದವರ ಮೇಲೆ ಕಲ್ಲಿನ ಬೀಮ್ ಬಿದ್ದಿದೆ. ಈ ಅವಘಡದಲ್ಲಿ ಸುನಿಲ್ ಶೆಟ್ಟಿ, ಲೋಕೇಶ್ ಭಂಡಾರಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ಕೊಂಬು, ಕಹಳೆ ಮತ್ತು…

Read More