‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ನಡು ರಸ್ತೆಯಲ್ಲಿ ನಿರ್ಮಾಪಕರನ್ನು ಅಡ್ಡಹಾಕಿದ ಹಂಸ
ಸ್ಟಾರ್ ಸುವರ್ಣ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ವಸುದೇವ ಕುಟುಂಬ’ ಇದೀಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ ಹಾಗೂ ಹಿರಿಯ ನಟ ಅವಿನಾಶ್ ಸೇರಿದಂತೆ ಪ್ರಮುಖ ಕಲಾವಿದರು ನಟಿಸುತ್ತಿರುವ ಈ ಧಾರಾವಾಹಿಯ ನಿರ್ಮಾಪಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಕಳೆದ ಕೆಲವು ತಿಂಗಳುಗಳಿಂದ ಸಂಭಾವನೆ ನೀಡಿಲ್ಲ ಹಾಗೂ ಯೂನಿಟ್ ಸದಸ್ಯರಿಗೆ ಸರಿಯಾದ ಆಹಾರ ಮತ್ತು ಸೌಲಭ್ಯ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದಾರೆ. ಈ ಹಿನ್ನೆಲೆ ಇಂದು ನಾಗರಬಾವಿಯ ಹೋಟೆಲ್…

