ಪರಪ್ಪನ ಅಗ್ರಹಾರ ಜೈಲಿನಲ್ಲಿ ತಾರತಮ್ಯ ಆರೋಪ: ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಸೂಚನೆ

ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ತಾರತಮ್ಯ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ದರ್ಶನ್ ಆರೋಪಿಸಿದ್ದಾರೆ.

ವಿಚಾರಣೆಯ ವೇಳೆ ಅವರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ಜೈಲಿನಲ್ಲಿ ಕ್ವಾರಂಟೈನ್ ಸೆಲ್‌ನಲ್ಲಿ ಇಡಲಾಗಿದ್ದು, ಸಹ ಕೈದಿಗಳಿಂದ ನಿಂದನೆ ಹಾಗೂ ಬೆದರಿಕೆ ಎದುರಿಸುತ್ತಿರುವುದಾಗಿ ತಿಳಿಸಲಾಗಿದೆ.

ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂಬ ಮನವಿಯೂ ಮಾಡಲಾಗಿದೆ. ಈ ಕುರಿತು ಸುಪ್ರೀಂ ಕೋರ್ಟ್, 57ನೇ ಸಿಸಿಹೆಚ್ ನ್ಯಾಯಾಲಯದಿಂದ ಸಂಪೂರ್ಣ ವರದಿ ಕೇಳಿದೆ.

ಜೈಲಿನಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳು, ಸಾಕ್ಷ್ಯ ವಿಚಾರಣೆ ಸ್ಥಿತಿ ಮತ್ತು ಪ್ರಕರಣದ ಪ್ರಗತಿ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಂದಿನ ವಿಚಾರಣೆ ವರದಿ ಆಧಾರವಾಗಿ ನಡೆಯಲಿದೆ.

Leave a Reply

Your email address will not be published. Required fields are marked *