
ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಪೋಕ್ಸೋ ಪ್ರಕರಣದ ವಿಚಾರಣೆಗೆ ಕರೆತಂದಿದ್ದ ಆರೋಪಿ ಕಾರ್ತಿಕ್ ಅಲಿಯಾಸ್ ರಾಮು, ಆತಂಕಕ್ಕೆ ಒಳಗಾಗಿ ಲಾಕರ್ ಕೀ ನುಂಗಿದ್ದಾನೆ.
ಏಪ್ರಿಲ್ 24ರಂದು ನಾಪತ್ತೆ ದೂರು ಸಂಬಂಧಿಸಿ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಆತನು ಭಯದಿಂದ ಕೀ ನುಂಗಿ ಆತ್ಮಹತ್ಯೆ ಯತ್ನಿಸಿದಂತೆ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಪೊಲೀಸರು ತಕ್ಷಣವೇ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಚಿಕಿತ್ಸೆ ವೇಳೆ ಸುಮಾರು ಮೂರು ದಿನಗಳ ನಂತರ ಮಲದ ಮೂಲಕ ಕೀ ಹೊರಬಂದಿದೆ. ಈ ಘಟನೆ ಪೊಲೀಸ್ ಸಿಬ್ಬಂದಿಯನ್ನೇ ಬೆಚ್ಚಿಬೀಳಿಸಿದೆ.
ಪ್ರಕರಣವನ್ನು ಈಗ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

