ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ!

Hindu-organization-protests-against-violence-against-Hindus-in-Bangladesh

Aug 10, 2024 - 07:13
 0  394
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ!
Hindu sanghatane

ಬಾಂಗ್ಲಾದೇಶದಲ್ಲಿ ರಾಷ್ಟ್ರಪತಿ ಶೇಖ್ ಹಸೀನಾ ರಾಜೀನಾಮೆ ನೀಡಿರುವ ಹಿನ್ನಲೆ, ಪ್ರತಿಭಟನೆಯ ಕಾವು ಜೋರಾಗಿದ್ದು, ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಅಮಾನುಷ ಕೃತ್ಯಗಳು ದಿನೇ-ದಿನೇ ಹೆಚ್ಚಾಗುತ್ತಿದೆ. ಈ ಘಟನೆಯನ್ನ ಖಂಡಿಸಿ ಇಂದು ಹಿಂದೂ ಸಂಘಟನೆ ಪ್ರತಿಭಟನೆ ನಡೆಸಿದೆ. ಸಿಲಿಕಾನ್ ಸಿಟಿಯಲ್ಲಿ ಅನೇಕ ಕಡೆ ಪ್ರತಿಭಟಿಸಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪ್ರಯತ್ನ ಮಾಡಿದ್ದಾರೆ.


ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆಯನ್ನ ನಡೆಸಲಾಗಿದೆ. ಈ ವೇಳೆ ಪ್ರತಿಭಟನೆ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದು, ಫ್ರೀಡಂ ಪಾರ್ಕ್‌ ಹೋಗಿ ಪ್ರತಿಭಟನೆ ಮಾಡಿ ಎಂದು ತಿಳಿಸಿದ್ದಾರೆ. ಆದ್ರೆ ಹಿಂದೂಪರ ಕಾರ್ಯಕರ್ತರು ಪೊಲೀಸರ ಮನವಿಗೆ ಕ್ಯಾರೆ ಎನ್ನದ, ಕೇಸರಿ ಬಾವುಟ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

What's Your Reaction?

like

dislike

love

funny

angry

sad

wow