ಕೇರಳದ ಭೂ ಕುಸಿತ ದುರಂತಕ್ಕೆ ನಿಖಿಲ್ ಕುಮಾರಸ್ವಾಮಿ ಸಂತಾಪ!
ಕೇರಳದ ಭೂ ಕುಸಿತ ದುರಂತಕ್ಕೆ ನಿಖಿಲ್ ಕುಮಾರಸ್ವಾಮಿ ಸಂತಾಪ!
ಕೇರಳದ ಭೂ ಕುಸಿತ ದುರಂತದಲ್ಲಿ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ಕುರಿತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ಕೇರಳದ ವಯನಾಡು ಬಳಿ ಭೂಕುಸಿತಕ್ಕೆ ಸಿಲುಕಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ಕೇಳಿ ಮನಸಿಗೆ ತುಂಬಾ ಬೇಸರವಾಗಿದೆ. ಸದ್ಯ ಇನ್ನು ಹಲವಾರು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ. ಈ ಭೀಕರ ದುರಂತದಲ್ಲಿ ಸಾವನ್ನಪ್ಪಿದ ಆ ಎಲ್ಲಾ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
What's Your Reaction?






