ವಿರಾಟ್ ಕೊಹ್ಲಿ ಗಾಯದ ಬಗ್ಗೆ ಕೊನೆಗೂ ಮೌನ ಮುರಿದ ಆರ್ಸಿಬಿ ನಾಯಕ ರಜತ್; ಕಿಂಗ್ ಕೊಹ್ಲಿ ಮುಂದಿನ ಪಂದ್ಯ ಆಡ್ತಾರಾ?
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳಿಗೆ ಕಳೆದ ಕೆಲವು ದಿನಗಳಿಂದ ವಿರಾಟ್ ಕೊಹ್ಲಿ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಆತಂಕವಿತ್ತು. ಮೈದಾನದಲ್ಲಿ ಕೊಹ್ಲಿ ಅಬ್ಬರಿಸುವುದನ್ನು ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ, ತಂಡದ ನಾಯಕ ರಜತ್ ಪಾಟೀದಾರ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಗಾಯದ ಸಮಸ್ಯೆ?: ಕಳೆದ ಪಂದ್ಯದಲ್ಲಿ ಬೌಂಡರಿ ಲೈನ್ ಬಳಿ ಚೆಂಡನ್ನು ತಡೆಯುವ ಪ್ರಯತ್ನದಲ್ಲಿ ವಿರಾಟ್ ಕೊಹ್ಲಿ ಕಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದರಿಂದಾಗಿ ಅವರು ಪಂದ್ಯದ ಮಧ್ಯದಲ್ಲೇ ಮೈದಾನದಿಂದ ಹೊರನಡೆದಿದ್ದರು. ಇದು ದೊಡ್ಡ ಮಟ್ಟದ…

