30 ವಾರ ಗರ್ಭಪಾತ ಪ್ರಕರಣ: ಸಂತ್ರಸ್ತೆಯ ಆಯ್ಕೆ ಮುಖ್ಯ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರದಿಂದ ಗರ್ಭಧಾರಣೆಗೊಂಡ ಅಪ್ರಾಪ್ತೆಯ 30 ವಾರ ಗರ್ಭಪಾತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. “ಅವಳ ನೋವು ಮತ್ತು ಅವಮಾನವನ್ನು ಊಹಿಸಿ ನೋಡಿ” ಎಂದು ಹೇಳಿದ ಪೀಠ, ಇಂತಹ ಪ್ರಕರಣಗಳಲ್ಲಿ ಗರ್ಭಪಾತಕ್ಕೆ ಸಮಯ ಮಿತಿ ಇರಬಾರದು ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠ, ಗರ್ಭಪಾತದ ಅಂತಿಮ ನಿರ್ಧಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಮೇಲಿದೆ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, ಪೋಷಕರಿಗೆ…

Read More

ಸ್ಮಶಾನದಲ್ಲಿ ಮದುವೆ! ಉರಿಯುವ ಚಿತೆಗಳ ನಡುವೆ ಸಪ್ತಪದಿ – ಉತ್ತರಾಖಂಡದಲ್ಲಿ ವಿವಾದ

ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ವಿಚಿತ್ರ ಮದುವೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಉರಿಯುವ ಚಿತೆಗಳ ನಡುವೆ ನವ ಜೋಡಿ ಸಪ್ತಪದಿ ತುಳಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಿವರ:ಹೌದು, ರಾಮಗಂಗಾ ಮತ್ತು ಬದನ್‌ಗಢ ನದಿಗಳ ಸಂಗಮದಲ್ಲಿರುವ ಸ್ಮಶಾನದಲ್ಲಿ ಈ ಘಟನೆ ನಡೆದಿದೆ. ದಶಕಗಳಿಂದ ಅಂತ್ಯಕ್ರಿಯೆ ನಡೆಯುವ ಈ ಪವಿತ್ರ ಸ್ಥಳವನ್ನು ಪ್ರವಾಸಿಗರು ಮದುವೆ ಸ್ಥಳವನ್ನಾಗಿ ಪರಿವರ್ತಿಸಿದ್ದರು. ಚಿತೆಗಳ ನಡುವೆ ಮಂಟಪ ನಿರ್ಮಿಸಿ, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿ ಅದ್ದೂರಿಯಾಗಿ ಮದುವೆ ನೆರವೇರಿಸಲಾಗಿದೆ….

Read More

ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್: ಯುವ ಬ್ಯಾಟರ್ ಸಾಹಿಲ್ ಪರಾಖ್ ಆಸ್ಪತ್ರೆಗೆ ದಾಖಲು

IPL 2026 ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಆಘಾತ ಸಂಭವಿಸಿದೆ. ಅಭ್ಯಾಸದ ವೇಳೆ ಯುವ ಎಡಗೈ ಬ್ಯಾಟರ್ ಸಾಹಿಲ್ ಪರಾಖ್ ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ನೆಟ್ಸ್ ಅಭ್ಯಾಸದಲ್ಲಿ ಈ ಘಟನೆ ಸಂಭವಿಸಿದೆ. ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ವೇಗದ ಬೌಲರ್ ಎಸೆದ ಬೌನ್ಸರ್ ಚೆಂಡು ಸಾಹಿಲ್ ಪರಾಖ್ ಅವರ ಹೆಲ್ಮೆಟ್‌ನ ಗ್ರಿಲ್ ನಡುವಿನಿಂದ ನೇರವಾಗಿ ಮುಖಕ್ಕೆ ಬಡಿದಿದೆ ಎಂದು ವರದಿಯಾಗಿದೆ. ಚೆಂಡು ತಗುಲಿದ ತಕ್ಷಣವೇ ಸಾಹಿಲ್ ಮೈದಾನದಲ್ಲೇ ಕುಸಿದು…

Read More

‘ವಾಟ್ಸಾಪ್ ಯುನಿವರ್ಸಿಟಿ’ ಮಾಹಿತಿಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌

ನವದೆಹಲಿ: ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದ್ದು, ‘ವಾಟ್ಸಾಪ್ ಯುನಿವರ್ಸಿಟಿ’ಯಲ್ಲಿ ಹರಡುವ ಮಾಹಿತಿಯನ್ನು ನಂಬಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಶಬರಿಮಲೆ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ವೇಳೆ ನ್ಯಾಯಾಲಯ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ವಿಚಾರಣೆ ನಡೆಸುತ್ತಿದ್ದು, ದಾವೂದಿ ಬೊಹರಾ ಸಮುದಾಯದ ಪ್ರಕರಣವನ್ನೂ ಪರಿಗಣಿಸಿತು. ವಿಚಾರಣೆ ವೇಳೆ ವಕೀಲರು ವಿವಿಧ ಅಭಿಪ್ರಾಯಗಳನ್ನು ಉಲ್ಲೇಖಿಸಿದಾಗ, ನ್ಯಾಯಮೂರ್ತಿಗಳು ವೈಯಕ್ತಿಕ ಅಭಿಪ್ರಾಯ ಮತ್ತು ಪರಿಶೀಲಿತ ಮಾಹಿತಿಯ ನಡುವಿನ…

Read More