ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕರ ವಿರುದ್ಧ ಆಪರೇಷನ್: 40 ಪ್ರಕರಣ ಪತ್ತೆ

ಮಂಡ್ಯ, ಮೇ 06: ಸರ್ಕಾರದ ಕಠಿಣ ನಿಯಮಗಳ ನಡುವೆಯೂ ಮಂಡ್ಯ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಗಂಭೀರ ಅಪರಾಧ ಎಂದು ಎಚ್ಚರಿಸಿದರು….

Read More

ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಕೋರ್ಟ್ ವಾರೆಂಟ್ – ಹರಿಹರ ನಗರ ಠಾಣೆಗೆ ಆದೇಶ

ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದ ಜಾತಿ ನಿಂದನೆ ಪ್ರಕರಣ ಇದೀಗ ದೊಡ್ಡ ತಿರುವು ಪಡೆದಿದೆ. 2023ರ ವಿಧಾನಸಭೆ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹರಿಹರ ಬಿಎಸ್‌ಪಿ ಮುಖಂಡ ಹನುಮಂತಪ್ಪ ಅವರು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಶಾಸಕರು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಕ್ರಮ ಕೈಗೊಂಡಿದೆ. ನ್ಯಾಯಮೂರ್ತಿ ಸಂತೋಶ್ ಗಜಾನನ…

Read More

ಬೈರತಿ ಬಸವರಾಜ್‌ಗೆ ಮತ್ತೊಂದು ಸಂಕಷ್ಟ: ಆಪ್ ನಾಯಕಿ ಕಾರು ಧ್ವಂಸ ಆರೋಪ

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದಿರುವ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಆಮ್ ಆದ್ಮಿ ಪಕ್ಷದ ನಾಯಕಿ ಸತ್ಯವಾಣಿ ಅವರು ತಮ್ಮ ಕಾರನ್ನು ಶಾಸಕರ ಬೆಂಬಲಿಗರು ಧ್ವಂಸಗೊಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಚುನಾವಣಾ ರಾಜಕೀಯದ ದ್ವೇಷದಿಂದ ತನ್ನ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಕಳೆದ ತಿಂಗಳು ತಮ್ಮ ವಿರುದ್ಧ ದೊಡ್ಡ ಮಟ್ಟದ ಫ್ಲೆಕ್ಸ್ ಅಭಿಯಾನ…

Read More

ಬೆಂಗಳೂರುದಲ್ಲಿ ತರಕಾರಿ ಬೆಲೆ ಭಾರಿ ಏರಿಕೆ | ಬೀನ್ಸ್ ಕೆಜಿ ₹160 | ಗ್ರಾಹಕರು ಕಂಗಾಲು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ 15 ದಿನಗಳಲ್ಲಿ ನಗರದ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ದುಪ್ಪಟ್ಟಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ವಿಶೇಷವಾಗಿ ಬೀನ್ಸ್ ದರ ಕೆಜಿಗೆ ₹160 ತಲುಪಿರುವುದು ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ ಹಾಗೂ ಅಕಾಲಿಕ ಮಳೆಯಿಂದ ತರಕಾರಿ ಬೆಳೆಗಳಿಗೆ ಭಾರಿ ಹಾನಿಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಭಾಗಗಳಲ್ಲಿ ಬೆಳೆ ನಾಶವಾಗಿರುವುದರಿಂದ ಮಾರುಕಟ್ಟೆಗೆ ಬರುವ ತರಕಾರಿಗಳ ಪ್ರಮಾಣ ಶೇ.30 ರಿಂದ…

Read More

ಬೆಂಗಳೂರಿನಲ್ಲಿ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ: ಆಟೋ ಚಾಲಕ ಮೃತ

ಬೆಂಗಳೂರು: ಕ್ಷುಲ್ಲಕ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದೆ. ಆಟೋ ಸೀಟ್ ವಿಚಾರಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮೃತನನ್ನು 26 ವರ್ಷದ ಮುಬಾರಕ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ತಬ್ರೇಜ್ (46) ಎಂದು ಪೊಲೀಸರು ತಿಳಿಸಿದ್ದಾರೆ. ಮೇ 1ರಂದು ಮುಬಾರಕ್ ತನ್ನ ಆಟೋ ಸೀಟ್ ತೆಗೆದುಕೊಂಡಿದ್ದಾನೆ ಎಂದು ತಬ್ರೇಜ್ ಮೇಲೆ ಆರೋಪಿಸಿ ಜಗಳ ಆರಂಭಿಸಿದ್ದ ಎನ್ನಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆ…

Read More

ನಟ ಚೇತನ್ ದೂರಿನ ಮೇರೆಗೆ ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ನಟ ಚೇತನ್ ಅಹಿಂಸಾ ನೀಡಿದ ದೂರಿನ ಮೇರೆಗೆ ಸಿನಿಮಾ ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದು ಹಾಗೂ ಮನೆ ಮುಂದೆ ಗಲಾಟೆ ನಡೆಸಿದ ಆರೋಪದಡಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ.ರಾಜ್‌ಕುಮಾರ್ ಸಮಾಧಿ ಜಾಗದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಮಾಡಿದ್ದ ಪೋಸ್ಟ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಪೋಸ್ಟ್ ವಿರೋಧಿಸಿ ಕೆಲವರು ಚೇತನ್ ನಿವಾಸದ ಬಳಿ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಟ ಚೇತನ್…

Read More

ಬೇಸಿಗೆಯ ಹೊಡೆತಕ್ಕೆ ಕೇರಳ ಕಂಗಾಲು: ಹಾವು ಕಡಿತದಿಂದ ಸರಣಿ ಸಾವು

ಕೇರಳ ರಾಜ್ಯದಲ್ಲಿ ಹಾವು ಕಡಿತ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿವೆ. ಕಳೆದ 10 ದಿನಗಳಲ್ಲಿ 60ಕ್ಕೂ ಹೆಚ್ಚು ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಿರುವನಂತಪುರಂ, ತ್ರಿಶೂರ್, ಆಲಪ್ಪುಝಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮನೆಗಳ ಒಳಗೆ ಹಾವುಗಳು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾವುಗಳು ತಣ್ಣನೆಯ ಸ್ಥಳಗಳ ಹುಡುಕಾಟದಲ್ಲಿ ಮನೆಗಳ ಒಳಗೆ ನುಗ್ಗುತ್ತಿವೆ ಎಂದು ತಜ್ಞರು ಹೇಳಿದ್ದಾರೆ. ಬೆಡ್, ಬಾತ್‌ರೂಮ್, ದಿಂಬುಗಳ ಅಡಿಯಲ್ಲಿ ಹಾವುಗಳು ಸಿಕ್ಕಿರುವ ಘಟನೆಗಳು…

Read More

ನರ್ಸಿಂಗ್ ವಿದ್ಯಾರ್ಥಿ ಸಾವು: ಕಾಲೇಜು ಆಡಳಿತದ ವಿರುದ್ಧ ಪೋಷಕರ ಆರೋಪ ತೀವ್ರ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಖಾಸಗಿ BTL ನರ್ಸಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ಕೇರಳ ಮೂಲದ 19 ವರ್ಷದ ವಿದ್ಯಾರ್ಥಿ ಆದಿತ್ಯ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಎರಡನೇ ವರ್ಷದ BSc ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಆದಿತ್ಯ, ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಹಪಾಠಿಗಳು ಈ ಘಟನೆ ಕಂಡು ತಕ್ಷಣ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಮೃತನ ತಂದೆ ಪ್ರದೀಪ್ ಅವರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಮಗನಿಗೆ…

Read More

ಮಂಡ್ಯದಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ಪ್ರಕಾರ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ಆದರೆ ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದೆ. ಇದೇ ವೇಳೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಬಯಲಾಗಿದೆ….

Read More

ಭಾರೀ ಮಳೆಗೆ ಮೆಟ್ರೋ ಮೊರೆ ಹೋದ ಬೆಂಗಳೂರಿಗರು: ‘ನಮ್ಮ ಮೆಟ್ರೋ’ದಲ್ಲಿ ಹೊಸ ದಾಖಲೆ

ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ರಸ್ತೆಗಳೆಲ್ಲಾ ಜಲಾವೃತಗೊಂಡ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು. ಇದೇ ವೇಳೆ Ola ಹಾಗೂ Uber ಸೇವೆಗಳಲ್ಲೂ ಬುಕಿಂಗ್ ಸಮಸ್ಯೆಗಳು ಎದುರಾದ ಹಿನ್ನೆಲೆ, ಸಾವಿರಾರು ಜನ ನಮ್ಮ ಮೆಟ್ರೋ ಮೊರೆ ಹೋದರು. ಈ ಪರಿಣಾಮ ಏಪ್ರಿಲ್ 29ರಂದು ನಮ್ಮ ಮೆಟ್ರೋ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದ್ದು, ಒಂದೇ ದಿನ 12 ಲಕ್ಷ 85 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ…

Read More