ಬಿರುಗಾಳಿ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ಪರಿಹಾರಕ್ಕೆ ರೈತರ ಒತ್ತಾಯ
ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಅಕಾಲಿಕ ಭಾರೀ ಮಳೆ ಹಾಗೂ ಬಿರುಗಾಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಸಾವಿರಾರು ಬಾಳೆ ಗಿಡಗಳು ನೆಲಕಚ್ಚಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಲೋಕೇಶ್, ಪರಮೇಶ್ ಹಾಗೂ ನಾಗರಾಜ್ ಅವರಿಗೆ ಸೇರಿದ ಬಾಳೆ ತೋಟಗಳು ಸಂಪೂರ್ಣ ಹಾನಿಗೊಳಗಾಗಿವೆ. ಇನ್ನೂ ಒಂದು ತಿಂಗಳಲ್ಲಿ ಕಟಾವು ಮಾಡಬೇಕಿದ್ದ ಬಾಳೆಗೊನೆಗಳು ಮಳೆ ಮತ್ತು ಗಾಳಿಯ ಅಬ್ಬರಕ್ಕೆ ಮುರಿದು ಬಿದ್ದಿವೆ. ಇದರಿಂದ ರೈತರು ಭಾರೀ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇದೇ…

