ಮದುವೆಗೆ 10 ದಿನ ಬಾಕಿ… ವರ ಸಾವು! ಪ್ರೀವೆಡ್ಡಿಂಗ್ ಪ್ರಯಾಣವೇ ಕೊನೆಯಾಯಿತು
ಹಾಸನ: ಮದುವೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ವರನೊಬ್ಬ ದುರಂತವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮನು ಎಲ್.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ನಿವಾಸಿಯಾಗಿದ್ದು, ಮೇ 10ರಂದು ಆಲೂರು ತಾಲ್ಲೂಕಿನ ತೊಗರನಹಳ್ಳಿ ಗ್ರಾಮದ ಕಾಂಚನ ಅವರೊಂದಿಗೆ ವಿವಾಹ ನಿಗದಿಯಾಗಿತ್ತು. ಇಂದು ಬೆಳಿಗ್ಗೆ ಪ್ರೀವೆಡ್ಡಿಂಗ್ ಶೂಟ್ಗಾಗಿ ವಧುವನ್ನು ಕರೆತರಲು ಮನು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ತೆರಳಿದ್ದರು….

