ಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, 10 ವರ್ಷದ ಬಾಲಕನಿಗೆ ಗಂಭೀರ ಗಾಯ
ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ನಲ್ಲಿ ಇದ್ದ ಎರಡು ಗ್ಯಾಸ್ ಸಿಲಿಂಡರ್ಗಳು ಏಕಾಏಕಿ ಸ್ಫೋಟಗೊಂಡು ಹೋಟೆಲ್ ಹೊತ್ತಿ ಉರಿದ ಘಟನೆ ನಡೆದಿದೆ. ಈ ಹೋಟೆಲ್ ತೆಕ್ಕಲಕೋಟೆಯ ನಿವಾಸಿ ಈರಣ್ಣ ಅವರಿಗೆ ಸೇರಿದ್ದಾಗಿದೆ. ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಆಗ ಹೋಟೆಲ್ನಲ್ಲಿ ಈರಣ್ಣನ ಕುಟುಂಬದ 9 ಮಂದಿ ಮಲಗಿದ್ದರು ಎಂದು ತಿಳಿದು ಬಂದಿದೆ. ಸಿಲಿಂಡರ್ ಸ್ಫೋಟದ ಪರಿಣಾಮವಾಗಿ 10 ವರ್ಷದ ಶ್ರೀನಿವಾಸ್ ಎಂಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ….

