ಕೈ ಪಡೆಯಲ್ಲಿ ಉಪಚುನಾವಣೆ ಕಲಿಗಳ ಅಂತಿಮ ಕಸರತ್ತು: ದಾವಣಗೆರೆ ದಕ್ಷಿಣಕ್ಕೆ ಶಾಮನೂರು ಕುಟುಂಬದ ಕುಡಿ? ಬಾಗಲಕೋಟೆಗೆ ಮೇಟಿ ಫಿಕ್ಸ್?
ರಾಜ್ಯ ರಾಜಕಾರಣದ ದೃಷ್ಟಿಯಿಂದ ಅತ್ಯಂತ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದು, ಅಂತಿಮವಾಗಿ ಇಬ್ಬರು ಪ್ರಬಲ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಹಂತಕ್ಕೆ ತಲುಪಿದ್ದಾರೆ. ದಾವಣಗೆರೆ ದಕ್ಷಿಣ: ಶಾಮನೂರು ಕುಟುಂಬಕ್ಕೆ ಮನ್ನಣೆ? ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಹಿಡಿತ ಬಲವಾಗಿದೆ. ಹೀಗಾಗಿ, ಈ ಬಾರಿ ಯುವ ನಾಯಕತ್ವಕ್ಕೆ ಆದ್ಯತೆ ನೀಡಲು…

