ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತಾರಕಕ್ಕೇರಿತು: ಇಂದು ಕೋಲ್ಕತ್ತಾಗೆ ಅಮಿತ್ ಶಾ ಭೇಟಿ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಾತ್ ಹತ್ಯೆಯಾದ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ನಾಯಕ ಮನೋಜ್ ಖಾನ್ ಮೇಲೆ ಕಚ್ಚಾ ಬಾಂಬ್ ದಾಳಿ ಯತ್ನ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಆತಂಕ ಸೃಷ್ಟಿಸಿದೆ. ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದುಷ್ಕರ್ಮಿಗಳು ಅಂಗಡಿಗಳನ್ನ ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಬಿಜೆಪಿ ನಾಯಕ ಮನೋಜ್ ಖಾನ್ ಅದೃಷ್ಟವಶಾತ್ ಪಾರಾಗಿದ್ದಾರೆ. ಇದನ್ನ ರಾಜಕೀಯ ಪ್ರತೀಕಾರ ಎಂದು…

Read More

ರಾಜ್ಯದ ಹಲವೆಡೆ 3 ದಿನ ಭಾರಿ ಮಳೆ ಎಚ್ಚರಿಕೆ | ಬೆಂಗಳೂರು ಸೇರಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು…

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: ಪೊಲೀಸರೇ ಶಾಕ್ ಆದ ಘಟನೆ!

ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಪೋಕ್ಸೋ ಪ್ರಕರಣದ ವಿಚಾರಣೆಗೆ ಕರೆತಂದಿದ್ದ ಆರೋಪಿ ಕಾರ್ತಿಕ್ ಅಲಿಯಾಸ್ ರಾಮು, ಆತಂಕಕ್ಕೆ ಒಳಗಾಗಿ ಲಾಕರ್ ಕೀ ನುಂಗಿದ್ದಾನೆ. ಏಪ್ರಿಲ್ 24ರಂದು ನಾಪತ್ತೆ ದೂರು ಸಂಬಂಧಿಸಿ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಆತನು ಭಯದಿಂದ ಕೀ ನುಂಗಿ ಆತ್ಮಹತ್ಯೆ ಯತ್ನಿಸಿದಂತೆ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಪೊಲೀಸರು ತಕ್ಷಣವೇ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಚಿಕಿತ್ಸೆ ವೇಳೆ ಸುಮಾರು…

Read More

ಹೊಸಪೇಟೆ ಮದುವೆ ಮಂಟಪದಲ್ಲಿ ಬಂಗಾರ-ಬೆಳ್ಳಿ ಕಳ್ಳತನ: CCTVನಲ್ಲಿ ಕಳ್ಳನ ಎಸ್ಕೇಪ್ ದೃಶ್ಯ ಸೆರೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೆಚ್ಚಿಬೀಳಿಸುವ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಮಧ್ಯೆಯೇ ಕಳ್ಳನೊಬ್ಬ ವಧುವಿಗೆ ಹಾಕಬೇಕಿದ್ದ ಚಿನ್ನ ಮತ್ತು ಬೆಳ್ಳಿ ಆಭರಣಗಳಿದ್ದ ಬ್ಯಾಗ್ ಕದ್ದೊಯ್ದಿದ್ದಾನೆ. ಮೇ 4ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಕಳ್ಳ ಬ್ಯಾಗ್ ಸಮೇತ ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳತನಗೊಂಡ ವಸ್ತುಗಳಲ್ಲಿ 40 ಗ್ರಾಂ ಚಿನ್ನದ ಸರ, ಅರ್ಧ ಕೆಜಿ ಬೆಳ್ಳಿ, 10 ಸಾವಿರ…

Read More

ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ: ನಾಲ್ಕು ಜಿಲ್ಲೆಗಳಿಗೆ ನೀರಿನ ಆತಂಕ

ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ ಕೇವಲ 10 ಟಿಎಂಸಿ ನೀರು ಮಾತ್ರ ಉಳಿದಿದ್ದು, ಇದರಿಂದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವುದು ತುಂಗಭದ್ರಾ ಮಂಡಳಿಗೆ ದೊಡ್ಡ ಸವಾಲಾಗಿದೆ. ಮೇ ತಿಂಗಳ ತೀವ್ರ ಬಿಸಿಲಿನಿಂದ ನೀರಿನ ಆವಿಯಾಗುವಿಕೆ ಹೆಚ್ಚಾಗಿದ್ದು, ಜೂನ್ ತಿಂಗಳಲ್ಲಿ ಮಳೆ ಬೀಳುವವರೆಗೂ ಲಭ್ಯವಿರುವ ಅಲ್ಪ ಪ್ರಮಾಣದ ನೀರನ್ನೇ ಅತ್ಯಂತ ಜಾಗರೂಕತೆಯಿಂದ ಬಳಸಬೇಕಾದ…

Read More

ಸಾರ್ವಜನಿಕ ಮೂತ್ರ ವಿಸರ್ಜನೆ ತಡೆಯಲು ಮೈಸೂರು ಪಾಲಿಕೆಯ ವಿನೂತನ ಪ್ರಯೋಗ

ಮೈಸೂರು ಪಾಲಿಕೆಯ ಹೊಸ ಪ್ರಯೋಗ: ಗೋಡೆ ಮುಂದೆ ಮೂತ್ರ ವಿಸರ್ಜನೆ ಮಾಡಿದರೆ ಎಲ್ಲರಿಗೂ ಕಾಣುತ್ತೆ! ಮೈಸೂರು, ಮೇ 6: ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ವಿನೂತನ ಕ್ರಮ ಕೈಗೊಂಡಿದೆ. ಬಸ್ ನಿಲ್ದಾಣಗಳ ಸಮೀಪ ಇರುವ ಕಾಂಪೌಂಡ್ ಗೋಡೆಗಳಿಗೆ ಸ್ಟೇನ್‌ಲೆಸ್ ಸ್ಟೀಲ್ ಶೀಟ್‌ಗಳನ್ನು ಅಳವಡಿಸಿ, ಅದನ್ನು ಕನ್ನಡಿಯಂತೆ ಬಳಸುವ ಪ್ರಯೋಗ ಆರಂಭಿಸಲಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಸುಮಾರು 80 ಮೀಟರ್ ಉದ್ದದ ಗೋಡೆಯ ಮೇಲೆ ಈ ವಿಶೇಷ ಶೀಟ್‌ಗಳನ್ನು…

Read More

ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ ಘಟನೆ: ಕದ್ದ ಮಾಂಗಲ್ಯ ಸರ 2 ದಿನಗಳ ಬಳಿಕ ಮನೆ ಮುಂದೆ ಪ್ರತ್ಯಕ್ಷ!

ಚಿಕ್ಕಬಳ್ಳಾಪುರದಲ್ಲಿ ಅಚ್ಚರಿಯ ಘಟನೆ ಒಂದು ನಡೆದಿದ್ದು, ಕಳುವಾಗಿದ್ದ ಮಹಿಳೆಯ ಮಾಂಗಲ್ಯ ಸರ ಎರಡು ದಿನಗಳ ಬಳಿಕ ಮತ್ತೆ ಅವರ ಮನೆ ಬಳಿಯೇ ಪತ್ತೆಯಾಗಿದೆ. ನಗರದ ವಾರ್ಡ್ ನಂಬರ್ 23ರ ಚಾಮರಾಜಪೇಟೆಯಲ್ಲಿ ಮೇ 3ರಂದು ಈ ಘಟನೆ ನಡೆದಿತ್ತು. ಮನೆಯ ಮುಂದೆ ನೀರಿನ ಸಂಪ್ ಪರಿಶೀಲಿಸುತ್ತಿದ್ದ ವೇಳೆ ಗೃಹಿಣಿ ಪ್ರಿಯಾ ಅವರ ಕುತ್ತಿಗೆಯಿಂದ ಇಬ್ಬರು ದುಷ್ಕರ್ಮಿಗಳು ಮಾಂಗಲ್ಯ ಸರ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು. ಪಲ್ಸರ್ 220 ಬೈಕ್‌ನಲ್ಲಿ ಬಂದಿದ್ದ ಆರೋಪಿಗಳಲ್ಲಿ ಒಬ್ಬ ಬೈಕ್‌ನಿಂದ ಇಳಿದು ಸರ ಕಿತ್ತುಕೊಂಡಿದ್ದರೆ, ಮತ್ತೊಬ್ಬ…

Read More

LPG ಬಳಿಕ ಪೆಟ್ರೋಲ್ ಸಂಕಷ್ಟ: ಬೆಂಗಳೂರಿನಲ್ಲಿ ವಾಹನ ಸವಾರರ ಆಕ್ರೋಶ

ಬೆಂಗಳೂರು ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. HP ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಇಂಧನ ದಾಸ್ತಾನು ಖಾಲಿಯಾಗಿದ್ದು, ವಾಹನ ಸವಾರರು ಬಂಕ್‌ಗಳ ಮುಂದೆ ಉದ್ದ ಸಾಲಿನಲ್ಲಿ ನಿಂತು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಬಂಕ್‌ಗಳಾದ ಶೆಲ್, ಜಿಯೋ ಮತ್ತು ನಯಾರಾ ಬಂಕ್‌ಗಳಲ್ಲಿ ಬೆಲೆ ಹೆಚ್ಚಾಗಿರುವುದರಿಂದ ಹೆಚ್ಚಿನ ಜನರು ಸರ್ಕಾರಿ ಸ್ವಾಮ್ಯದ ಬಂಕ್‌ಗಳತ್ತ ಮುಖ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಸಾರ್ವಜನಿಕ ಬಂಕ್‌ಗಳಲ್ಲಿ ಬೇಡಿಕೆ ಏರಿಕೆಯಾಗಿದ್ದು, ಡಿಪೋಗಳಿಂದ ಸರಿಯಾದ ಸಮಯಕ್ಕೆ ಇಂಧನ ಸರಬರಾಜು ಆಗುತ್ತಿಲ್ಲ…

Read More

ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕರ ವಿರುದ್ಧ ಆಪರೇಷನ್: 40 ಪ್ರಕರಣ ಪತ್ತೆ

ಮಂಡ್ಯ, ಮೇ 06: ಸರ್ಕಾರದ ಕಠಿಣ ನಿಯಮಗಳ ನಡುವೆಯೂ ಮಂಡ್ಯ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಗಂಭೀರ ಅಪರಾಧ ಎಂದು ಎಚ್ಚರಿಸಿದರು….

Read More

ತಮಿಳುನಾಡಲ್ಲಿ ಸರ್ಕಾರ ರಚಿಸಲು ವಿಜಯ್‌ಗೆ ಕಾಂಗ್ರೆಸ್ ಬೆಂಬಲ? ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್‌ನ ತಮಿಳುನಾಡು ಘಟಕವು ನಾಳೆ ಬೆಳಗ್ಗೆ ಚೆನ್ನೈನಲ್ಲಿ ಸಭೆ ಸೇರಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಜಾತ್ಯತೀತ ಸರ್ಕಾರ ಸ್ಥಾಪನೆಗೆ ಜನಾದೇಶ ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರವನ್ನು ರಾಜ್ಯದಲ್ಲಿ…

Read More