ನಾವು ಅಧಿಕಾರಕ್ಕೆ ತಂದವರು” – ಕಾಂಗ್ರೆಸ್ ವಿರುದ್ಧ ಮುಸ್ಲಿಂ ಸಮುದಾಯ ಆಕ್ರೋಶ
ಮಂಡ್ಯ: ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಧರ್ಮಗುರುಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಜೀರ್ ಅಹಮ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ವಜಾ ನಿರ್ಧಾರವನ್ನು ಖಂಡಿಸಿ ಮಂಡ್ಯದ ಜಾಮಿಯಾ ಮಸೀದಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಗುರು ಅಬ್ದುಲ್ ಖದೀರ್, “ಮುಸ್ಲಿಂ ಸಮುದಾಯ ಕಾಂಗ್ರೆಸ್ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದೆ. ಆದರೆ ಈಗ ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ” ಎಂದು ಆರೋಪಿಸಿದರು. “ನಾವು ಹಗಲಿರುಳು…

