SSLC ಫಲಿತಾಂಶದಲ್ಲಿ ಭಾರಿ ಎಡವಟ್ಟು: 71 ಅಂಕ ಬದಲು 12 – ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಕೊಪ್ಪಳ: ವಿದ್ಯಾರ್ಥಿ ಜೀವನದ ಪ್ರಮುಖ ಹಂತವಾದ SSLC ಫಲಿತಾಂಶದಲ್ಲಿ ಭಾರಿ ಎಡವಟ್ಟು ಬೆಳಕಿಗೆ ಬಂದಿದೆ. ಜಿಲ್ಲೆಯ ಕಾತರಕಿ ಗುಡ್ಲಾನೂರ ಗ್ರಾಮದ ಸಂಜನಾ ಮಡಿವಾಳ ಎಂಬ ವಿದ್ಯಾರ್ಥಿನಿ ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಕನ್ನಡ ವಿಷಯದಲ್ಲಿ ಕೇವಲ 12 ಅಂಕ ಮಾತ್ರ ನಮೂದಾಗಿರುವುದು ಆಘಾತಕ್ಕೆ ಕಾರಣವಾಗಿದೆ. ಪರೀಕ್ಷೆಯ ಉತ್ತರ ಪತ್ರಿಕೆಯ ನಕಲು ಪರಿಶೀಲನೆ ಮಾಡಿದಾಗ ಸಂಜನಾ ವಾಸ್ತವವಾಗಿ 71 ಅಂಕಗಳನ್ನು ಪಡೆದಿರುವುದು ಬಹಿರಂಗವಾಗಿದೆ. ಆದರೆ ತಪ್ಪು ಅಂಕ ನಮೂದು ವಿದ್ಯಾರ್ಥಿನಿಗೆ ಭಾರೀ ಮಾನಸಿಕ ಆಘಾತ ಉಂಟುಮಾಡಿದ್ದು, ಆತ್ಮಹತ್ಯೆಗೆ…

Read More

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮಹತ್ವದ ಹೆಜ್ಜೆಯೊಂದನ್ನು ಶಿಕ್ಷಣ ಇಲಾಖೆ ಇಟ್ಟಿದೆ. ಇನ್ನುಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಾರ್ಥನೆ ಮುಗಿದ ತಕ್ಷಣ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ವಿದ್ಯಾರ್ಥಿಗಳಿಗೆ ನ್ಯೂಸ್ ಪೇಪರ್ ಓದಿಸುವಂತೆ ಸೂಚಿಸಲಾಗಿದೆ. ಈ ನಿಯಮವು ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ ಎಲ್ಲ ಶಾಲೆಗಳಿಗೆ ಅನ್ವಯವಾಗಲಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಈ…

Read More

PGCET 2026 ಅರ್ಜಿ ಗಡುವು ಏ.30ರವರೆಗೆ ವಿಸ್ತರಣೆ – KEA ಮಹತ್ವದ ಘೋಷಣೆ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಹಾಗೂ ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ನಡೆಯುವ PGCET 2026 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇರುವ ಗಡುವನ್ನು ಏಪ್ರಿಲ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಈ ಬಗ್ಗೆ KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅಭ್ಯರ್ಥಿಗಳ ಮನವಿಯ ಮೇರೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಮೇ…

Read More

ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌ – 625ಕ್ಕೆ 625 ಅಂಕ ಸಾಧನೆ

ಚಿಕ್ಕೋಡಿ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಥಣಿ ತಾಲ್ಲೂಕಿನ ಕಟಗೇರಿ ಗ್ರಾಮದ ಪ್ರಾರ್ಥನಾ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ತಂದೆ ನಾಗಪ್ಪ ಬಿರಾದಾರ ಅವರು ಸರ್ಕಾರಿ ಶಾಲೆ ಶಿಕ್ಷಕರಾಗಿದ್ದು, ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬುದಕ್ಕೆ ಮಗಳೇ ಉದಾಹರಣೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Read More

SSLC ಫಲಿತಾಂಶ ದಿನವೇ ಡಬಲ್ ದುರಂತ: ಫೇಲ್ ಆದ ವಿದ್ಯಾರ್ಥಿ ಆತ್ಮಹತ್ಯೆ, ಪಾಸ್ ಆದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು

ಚಿತ್ರದುರ್ಗ (ಏ.26): ಎಸ್ಎಸ್‌ಎಲ್‌ಸಿ (SSLC) ಫಲಿತಾಂಶ ಪ್ರಕಟವಾದ ದಿನವೇ ರಾಜ್ಯದಲ್ಲಿ ಎರಡು ಹೃದಯವಿದ್ರಾವಕ ಘಟನೆಗಳು ಬೆಳಕಿಗೆ ಬಂದಿವೆ. ಚಿತ್ರದುರ್ಗದಲ್ಲಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಹೊರಪೇಟೆ ಪ್ರದೇಶದ ಡಾನ್ ಬೋಸ್ಕೋ ಶಾಲೆಯ ವಿದ್ಯಾರ್ಥಿ ಅಯಾನ್ ಬೇಗ್ (16) ನೇಣು ಬಿಗಿದುಕೊಂಡು ಜೀವ ಅಂತ್ಯಗೊಳಿಸಿದ್ದಾನೆ. ಫಲಿತಾಂಶ ಪ್ರಕಟವಾದ ಕೆಲವೇ ಹೊತ್ತಿನಲ್ಲಿ ಈ ದುರ್ಘಟನೆ ನಡೆದಿರುವುದು ಕುಟುಂಬದವರನ್ನು ಶೋಕ ಸಾಗರಕ್ಕೆ ತಳ್ಳಿದೆ. ಇನ್ನೊಂದೆಡೆ, ಕೋಲಾರ ಜಿಲ್ಲೆಯಲ್ಲಿ ಪಾಸ್ ಆದ ಖುಷಿಯಲ್ಲಿ ಸ್ನೇಹಿತರೊಂದಿಗೆ…

Read More

ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ವಿದ್ಯಾರ್ಥಿನಿಯರ ಮೇಲೆ ಅಚ್ಚರಿಯ ಘಟನೆ ನಡೆದಿದೆ.

ಸಿಇಟಿ ಪರೀಕ್ಷೆ (CET Exam) ವೇಳೆ ಬೆಳಗಾವಿ ಸೇರಿದಂತೆ ಹಲವಾರು ಪರೀಕ್ಷಾ ಕೇಂದ್ರಗಳಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರ ತೀವ್ರ ತಪಾಸಣೆ ನಡೆಸಿದ ಸಿಬ್ಬಂದಿ, ಕೆಲ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ನಂತರವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಿರುವುದು ಆಘಾತಕ್ಕೆ ಕಾರಣವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಬಾರಿ ಮೊದಲ ಬಾರಿಗೆ ಕಡ್ಡಾಯ ವಸ್ತ್ರ ಸಂಹಿತೆ ಜಾರಿಗೆ ತಂದಿದ್ದು, ಅದರ ಭಾಗವಾಗಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ…

Read More

SSLC ತೃತೀಯ ಭಾಷೆ ವಿವಾದಕ್ಕೆ ಹೈಕೋರ್ಟ್ ತೀರ್ಪು: ಗ್ರೇಡ್ ಬದಲು ಅಂಕಗಳೇ ನೀಡಲು ಸರ್ಕಾರಕ್ಕೆ ಸೂಚನೆ..!

‌ಕರ್ನಾಟಕ ಹೈಕೋರ್ಟ್ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ತೃತೀಯ ಭಾಷೆ ವಿಷಯಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಅಂಕಗಳನ್ನೇ ನೀಡಬೇಕು ಎಂದು ನಿರ್ದೇಶನ ನೀಡಿದೆ. ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿದಂತೆ ಮೂವರು ವಿದ್ಯಾರ್ಥಿಗಳು ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ…

Read More