ಆನೇಕಲ್ ಉದ್ಯಮಿ ಗೋಪಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಿಐಡಿ ತನಿಖೆಗೆ ಆದೇಶಿಸಿದ ಗೃಹ ಸಚಿವ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಸಂಚಲನ ಮೂಡಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗೋಪಿ ಅಲಿಯಾಸ್ ಗೋಪಾಲ್ ಅವರ ಅಪಹರಣ ಮತ್ತು ಕೊಲೆ ಪ್ರಕರಣವು ಈಗ ಮಹತ್ವದ ಹಂತಕ್ಕೆ ತಲುಪಿದೆ. ರಾಜ್ಯ ಸರ್ಕಾರವು ಈ ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ, ಸಮಗ್ರ ತನಿಖೆಗಾಗಿ ಇದನ್ನು ಅಪರಾಧ ತನಿಖಾ ಇಲಾಖೆಗೆ (CID) ಹಸ್ತಾಂತರಿಸಿದೆ. ಏನಿದು ಘಟನೆ? ಮಾರ್ಚ್ 8ರ ಭಾನುವಾರ ಸಂಜೆ, ಆನೇಕಲ್ನ ಹೊನ್ನಕಲಶಾಪುರದ ನಿವಾಸಿ ಗೋಪಿ (38) ಅವರು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ತಮ್ಮ ಸ್ನೇಹಿತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು….

