ಹಿರೇಬಾಗೇವಾಡಿಯಲ್ಲಿ ಆತಂಕ: ದುಷ್ಕರ್ಮಿಗಳ ದಾಳಿ, ಪೊಲೀಸರ ವಿರುದ್ಧ ಆರೋಪ

ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿ 15 ದಿನಗಳಾದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಗಂಭೀರತೆ ಇದ್ದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೇ ವೇಳೆ, ತಡರಾತ್ರಿ ದುಷ್ಕರ್ಮಿಗಳು ಸಾಂಬ್ರೆಕರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಭಯ ಹುಟ್ಟಿಸಿದೆ. ಮನೆಯಲ್ಲಿದ್ದ ಕುಟುಂಬ ಸದಸ್ಯರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕೇವಲ ಕಾಟಾಚಾರಕ್ಕೆ ಪರಿಶೀಲನೆ ನಡೆಸಿ ಹಿಂತಿರುಗಿದ್ದಾರೆ ಎಂದು…

Read More

ಲ್ಯಾಬ್‌ನಲ್ಲಿ ಸುರಕ್ಷತೆ ಪ್ರಶ್ನೆ: ಮಹಿಳೆಗೆ ಜೀವ ಬೆದರಿಕೆ ಆರೋಪ

ಬೆಂಗಳೂರು ನಗರದಲ್ಲಿ ಆತಂಕ ಮೂಡಿಸಿದ ಘಟನೆ!ಬ್ಯಾಡರಹಳ್ಳಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ತಪಾಸಣೆಗೆ ಹೋದ ಮಹಿಳೆಗೆ ಕಿರುಕುಳ ಆರೋಪ ಕೇಳಿಬಂದಿದೆ. ರಕ್ತದ ಮಾದರಿ ತೆಗೆದುಕೊಳ್ಳುವ ವೇಳೆ ನಿರ್ಲಕ್ಷ್ಯ ತೋರಿದ ಲ್ಯಾಬ್ ಸಿಬ್ಬಂದಿ, ಮಹಿಳೆ ಪ್ರಶ್ನಿಸಿದಾಗ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇಷ್ಟೇ ಅಲ್ಲ, ಕೆಲ ದಿನಗಳ ನಂತರ ಮಹಿಳೆಯ ಮನೆಗೆ ತೆರಳಿ ವಿಷಯ ಹೊರಗೆ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು-ಮದುರೈ ಬಸ್ ಅಪಘಾತ: ಸೇಲಂನಲ್ಲಿ ಆತಂಕ

ತಮಿಳುನಾಡಿನ ಸೇಲಂ ಸಮೀಪ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಮದುರೈಗೆ ತೆರಳುತ್ತಿದ್ದ ಈ ಪಲ್ಲಕ್ಕಿ ಬಸ್ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸೇಲಂ ಬಳಿ ಸಾಗುತ್ತಿದ್ದಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಾಯವನ್ನು ಅರಿತ ಚಾಲಕ ತಕ್ಷಣ ಬಸ್ ಅನ್ನು ರಸ್ತೆ ಬದಿಯ ಮಣ್ಣಿನ ಗುಡ್ಡದ ಮೇಲೆ ಹತ್ತಿಸಿ ನಿಲ್ಲಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ….

Read More

ಬೆಂದಕಾಳೂರಿಗೆ ಬಿಸಿ ಎಚ್ಚರಿಕೆ: ಮೇನಲ್ಲಿ ಇನ್ನಷ್ಟು ಉಷ್ಣತೆ ಏರಿಕೆ ಸಾಧ್ಯತೆ

ಏಪ್ರಿಲ್‌ನಲ್ಲೇ ತೀವ್ರ ಬಿಸಿಲಿನಿಂದ ಕರುನಾಡು ಕಾದ ಕಾವಲಿಯಂತಾಗಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ಪ್ರಕಾರ, ಮೇ ತಿಂಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆ ಕಾಣಲಿದೆ. 3 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಮೇ ಮೊದಲ ವಾರದಲ್ಲೇ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುಭಾಗದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.ಈ ವರ್ಷ ಮಳೆಯ ಕೊರತೆ ಮತ್ತು ನಿರಂತರ ಬಿಸಿಲು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ದೇಶದ ಹಲವಾರು ನಗರಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ…

Read More

ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು – ಹಾವೇರಿಯಲ್ಲಿ ಹೃದಯ ಕಲುಕುವ ಘಟನೆ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ದುರ್ಘಟನೆ ಸಂಭವಿಸಿದೆ. 52 ವರ್ಷದ ಅಬ್ಬಾಸ್ ನಾಸೂರ್ ಅವರು ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಇಳಿದಾಗ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಈಜು ತಜ್ಞರು ಶೋಧ ಕಾರ್ಯ ನಡೆಸಿದರು. ಆದರೆ ವ್ಯಕ್ತಿಯನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ. ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…

Read More

ಚಿಕ್ಕಮಗಳೂರು ಬೀರೂರು: ಕೌಟುಂಬಿಕ ಕಲಹದಿಂದ ಸಬ್ ಇನ್ಸ್‌ಪೆಕ್ಟರ್ ಪತ್ನಿ ಪದ್ಮ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ದುರಂತ ಘಟನೆ ನಡೆದಿದೆ. ಬೀರೂರು ಠಾಣೆಯ ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಅವರ ಪತ್ನಿ ಪದ್ಮ (34) ಕೌಟುಂಬಿಕ ಕಲಹದಿಂದ ಬೇಸತ್ತು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೂಲಗಳ ಪ್ರಕಾರ, ತಿಪ್ಪೇಶ್ ಮತ್ತು ಪದ್ಮ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಇತ್ತೀಚೆಗೆ ದಂಪತಿಯ ನಡುವೆ ಕೌಟುಂಬಿಕ ಕಲಹ ಹೆಚ್ಚಾಗಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪದ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬೆಳಕಿಗೆ ಬಂದ…

Read More

ಕಾಂತಾರ’ ಹಿಟ್ ಬಳಿಕ ಹಳೆಯ ಸಿನಿಮಾ ರಿಲೀಸ್: ರಿಷಬ್ ಶೆಟ್ಟಿ ತೆಲುಗಿಗೆ ಎಂಟ್ರಿ

ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ರಿಷಬ್ ಶೆಟ್ಟಿ ಅವರ ಹಳೆಯ ಸಿನಿಮಾವೊಂದು ಈಗ ಮತ್ತೆ ಸುದ್ದಿಯಲ್ಲಿದೆ. ‘ಹರಿಕಥೆ ಅಲ್ಲ ಗಿರಿಕಥೆ’ ಎಂಬ ಚಿತ್ರವು ಇದೀಗ ‘ಎ ಫಿಲ್ಮ್ ಬೈ ಗಿರಿ’ ಹೆಸರಿನಲ್ಲಿ ತೆಲುಗಿಗೆ ಡಬ್ ಆಗಿ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಮೇ 8ರಂದು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ತೆರೆಗೆ ಬರಲಿದೆ. ವಿಶೇಷವೆಂದರೆ, ಈ ಚಿತ್ರವು 2022ರಲ್ಲಿ ‘ಕಾಂತಾರ’ ಬಿಡುಗಡೆಯಕ್ಕೂ ಮೊದಲು ತೆರೆಕಂಡಿತ್ತು. ಆಗ ಈ ಚಿತ್ರ…

Read More

SSLC ಫಲಿತಾಂಶದಲ್ಲಿ ಭಾರಿ ಎಡವಟ್ಟು: 71 ಅಂಕ ಬದಲು 12 – ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಕೊಪ್ಪಳ: ವಿದ್ಯಾರ್ಥಿ ಜೀವನದ ಪ್ರಮುಖ ಹಂತವಾದ SSLC ಫಲಿತಾಂಶದಲ್ಲಿ ಭಾರಿ ಎಡವಟ್ಟು ಬೆಳಕಿಗೆ ಬಂದಿದೆ. ಜಿಲ್ಲೆಯ ಕಾತರಕಿ ಗುಡ್ಲಾನೂರ ಗ್ರಾಮದ ಸಂಜನಾ ಮಡಿವಾಳ ಎಂಬ ವಿದ್ಯಾರ್ಥಿನಿ ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಕನ್ನಡ ವಿಷಯದಲ್ಲಿ ಕೇವಲ 12 ಅಂಕ ಮಾತ್ರ ನಮೂದಾಗಿರುವುದು ಆಘಾತಕ್ಕೆ ಕಾರಣವಾಗಿದೆ. ಪರೀಕ್ಷೆಯ ಉತ್ತರ ಪತ್ರಿಕೆಯ ನಕಲು ಪರಿಶೀಲನೆ ಮಾಡಿದಾಗ ಸಂಜನಾ ವಾಸ್ತವವಾಗಿ 71 ಅಂಕಗಳನ್ನು ಪಡೆದಿರುವುದು ಬಹಿರಂಗವಾಗಿದೆ. ಆದರೆ ತಪ್ಪು ಅಂಕ ನಮೂದು ವಿದ್ಯಾರ್ಥಿನಿಗೆ ಭಾರೀ ಮಾನಸಿಕ ಆಘಾತ ಉಂಟುಮಾಡಿದ್ದು, ಆತ್ಮಹತ್ಯೆಗೆ…

Read More

ಆಡುಗೋಡಿಯಲ್ಲಿ ಯುವತಿಯ ಭೀಕರ ಸಾವು: ಪೂಜಾ ದತ್ತ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು, ಏ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಯುವತಿ ಪೂಜಾ ದತ್ತ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಆಘಾತ ಮೂಡಿಸಿದೆ. ಆಡುಗೋಡಿ ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ಪೂಜಾ ದತ್ತ ಅವರ ಮೃತದೇಹ ಬೆತ್ತಲೆ ಹಾಗೂ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಒಳನುಗ್ಗಿದಾಗ, ಪೂಜಾ ಅವರ ಮೃತದೇಹ ಭೀಕರ…

Read More

ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಹವಾಮಾನದಲ್ಲಿ ಅಚಾನಕ್ ಬದಲಾವಣೆ ಕಂಡುಬಂದಿದ್ದು, ಹೀಟ್ ವೇವ್‌ನಿಂದ ತತ್ತರಿಸಿದ್ದ ಜನತೆಗೆ ಮಳೆ ಸ್ವಲ್ಪ ಮಟ್ಟಿನ ನಿರಾಳತೆ ನೀಡಲಿದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಇಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ, ಉತ್ತರ ಕನ್ನಡ,…

Read More