ಗೃಹಬಳಕೆ ಎಲ್ಪಿಜಿ ನಿರಾಳ, ಹೋಟೆಲ್ಗಳಿಗೆ ಸಂಕಷ್ಟ: ರಾಜ್ಯದ ಅಡುಗೆ ಅನಿಲ ಸ್ಥಿತಿಗತಿ ಬಗ್ಗೆ ಸಚಿವರ ಹೇಳಿಕೆ!
ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಅಡುಗೆ ಅನಿಲದ (LPG) ತೀವ್ರ ಕೊರತೆಯಾಗಲಿದೆ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿತ್ತು. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಹಾಗೂ ಶಿಪ್ಪಿಂಗ್ ಸಮಸ್ಯೆಯಿಂದಾಗಿ ಗ್ಯಾಸ್ ಸಿಲಿಂಡರ್ ಸಿಗುವುದು ಕಷ್ಟವಾಗಬಹುದು ಎಂಬ ವದಂತಿಗಳು ಹರಡಿದ್ದವು. ಈ ಎಲ್ಲಾ ಗೊಂದಲಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ತೆರೆ ಎಳೆದಿದ್ದಾರೆ. ಗೃಹಬಳಕೆದಾರರಿಗೆ ಆತಂಕ ಬೇಡ: ಸಚಿವ ಮುನಿಯಪ್ಪ ಅವರು ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ…

