ಜಾತ್ರೆಯಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರು ಗಂಭೀರ ಗಾಯ
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಜಾತ್ರೆಯಲ್ಲಿ ಭೀಕರ ದುರಂತ ಸಂಭವಿಸಿದೆ. ನಗರದ ಥೇರು ಮೈದಾನದಲ್ಲಿ ನಡೆದ ಶ್ರೀ ಬಸವೇಶ್ವರ ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವನ ಎರಡೂ ಕಾಲುಗಳು ಕಟ್ ಆಗಿವೆ. ಧನರಾಜ್ ಎಂಬ ವ್ಯಕ್ತಿ ರಥದಡಿಗೆ ಸಿಲುಕಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನೆಯ ತೀವ್ರತೆಯಿಂದ ಸ್ಥಳದಲ್ಲೇ ಜನರಲ್ಲಿ ಆತಂಕ ಉಂಟಾಗಿದೆ. ಇನ್ನೂ ಇಬ್ಬರು ವ್ಯಕ್ತಿಗಳ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮಾಶಂಕರ ಎಂಬ ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು…

