ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಬಸ್ ಪಲ್ಟಿ – ಯಾವುದೇ ಪ್ರಾಣಹಾನಿ ಇಲ್ಲ

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮಂಗಳವಾರ ಬೆಳಗ್ಗೆ ಸರ್ಕಾರಿ ಬಸ್ ಪಲ್ಟಿಯಾಗಿದೆ. ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ 44 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಸ್ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ.

Read More

ಪ್ರಯಾಣಿಕ ರೈಲು ಅಪಘಾತ: 81ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ

ಇಂಡೋನೇಷ್ಯಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಲೆವೆಲ್ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲಿ ನಿಂತಿತ್ತು. ಇದೇ ವೇಳೆಗೆ ಮತ್ತೊಂದು ರೈಲು ಬಂದು ಮಹಿಳೆಯರ ಬೋಗಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 81 ಮಂದಿಗೆ ಗಾಯಗಳಾಗಿವೆ. ಹಲವರು ಇನ್ನೂ ಬೋಗಿಗಳೊಳಗೆ ಸಿಲುಕಿಕೊಂಡಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆ ವೇಗವಾಗಿ ಮುಂದುವರಿದಿದೆ. ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ (KNKT) ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದೆ.

Read More

ಬೆಂಗಳೂರು ನಂದಿನಿ ಲೇಔಟ್‌ನಲ್ಲಿ ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ – ಪಿಜಿ ಯುವತಿಯರ ರೋಚಕ ರಕ್ಷಣೆ

ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಪಕ್ಕದ ಮನೆಗಳು ಹಾಗೂ ಲೇಡೀಸ್ ಪಿಜಿಗೂ ಹಬ್ಬಿದ ಪರಿಣಾಮ ದೊಡ್ಡ ದುರಂತ ತಪ್ಪಿದಂತಾಗಿದೆ. ಗೋಡೌನ್‌ನಲ್ಲಿ ಪ್ಲಾಸ್ಟಿಕ್ ವಸ್ತುಗಳು ಸಂಗ್ರಹವಾಗಿದ್ದ ಕಾರಣ ಬೆಂಕಿ ಭಾರೀ ವೇಗದಲ್ಲಿ ಹರಡಿತು. ಬೆಂಕಿಯ ತೀವ್ರತೆಗೆ ಸುತ್ತಮುತ್ತಲಿನ ಮರಗಳು, ಕಬ್ಬಿಣದ ಗೇಟ್‌ಗಳು ಕೂಡ ಹೊತ್ತಿ ಉರಿದವು. ಘಟನೆಯ ವೇಳೆಗೆ ಪಕ್ಕದ ಲೇಡೀಸ್ ಪಿಜಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಯುವತಿಯರು ವಾಸವಿದ್ದರು….

Read More

ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು, ಯುವತಿ ಕಾಲು ಕಟ್

ಶೀರ್ಷಿಕೆ:ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು, ಯುವತಿ ಕಾಲು ಕಟ್ ರಾಯಚೂರು:ಜಾತ್ರೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆಗೆ ತೆರಳಿದ್ದ ನಾಲ್ವರು ಒಂದೇ ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಜ್ಜಿಹೋಗಿದ್ದು, ಮೃತರ ದೇಹಗಳು ನಜ್ಜುಗುಜ್ಜಾಗಿ…

Read More

ಆನೇಕಲ್‌ನಲ್ಲಿ ತಾಯಿ-ಮಗು ನಿಗೂಢ ಸಾವು: ಕೃಷಿ ಹೊಂಡದಲ್ಲಿ ಶವ ಪತ್ತೆ

ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ತಾಯಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಲಾವಣ್ಯ (ತಾಯಿ) ಹಾಗೂ ಅವರ 8 ವರ್ಷದ ಮಗಳು ಎಂದು ಗುರುತಿಸಲಾಗಿದೆ. ಇಬ್ಬರ ಶವಗಳು ಗ್ರಾಮದ ಕೃಷಿ ಹೊಂಡದಲ್ಲಿ ಪತ್ತೆಯಾಗಿವೆ. ಈ ದುರ್ಘಟನೆ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನಗಳು ಮೂಡಿದ್ದು, ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ. ಘಟನೆ ಕುರಿತು ಮಾಹಿತಿ ಪಡೆದ ಸೂರ್ಯ ನಗರ ಪೊಲೀಸ್ ಠಾಣೆ ಪೊಲೀಸರು…

Read More

ಹುಟ್ಟುಹಬ್ಬದ ಸಂಭ್ರಮವೇ ದುರಂತ: ಕೇಕ್ ಹಚ್ಚಿದಕ್ಕೆ ಸ್ನೇಹಿತರನ್ನು ಕೊಂದ ಯುವಕ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬೆಚ್ಚಿಬೀಳಿಸುವಂತಹ ಘಟನೆ ನಡೆದಿದೆ. ಸಾಮಾನ್ಯವಾಗಿ ಸಂತೋಷದಿಂದ ನಡೆಯಬೇಕಿದ್ದ ಹುಟ್ಟುಹಬ್ಬದ ಸಂಭ್ರಮವೇ ರಕ್ತಪಾತದಲ್ಲಿ ಅಂತ್ಯವಾಗಿದೆ. ಬರ್ತ್‌ಡೇ ಪಾರ್ಟಿಯ ವೇಳೆ ಸ್ನೇಹಿತರು ಬರ್ತ್‌ಡೇ ಬಾಯ್ ಮುಖಕ್ಕೆ ಕೇಕ್ ಹಚ್ಚಿದ್ದಾರೆ. ಇದೇ ವಿಚಾರ ಜಗಳಕ್ಕೆ ಕಾರಣವಾಗಿ, ಕ್ಷಣಾರ್ಧದಲ್ಲಿ ಪರಿಸ್ಥಿತಿ ತೀವ್ರಗೊಂಡಿದೆ. ಜಗಳ ತಾರಕಕ್ಕೇರುವಷ್ಟರಲ್ಲಿ ಬರ್ತ್‌ಡೇ ಬಾಯ್ ಜೀತು ಸೈನಿ ತನ್ನ ಸ್ನೇಹಿತರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಅಮರ್‌ದೀಪ್ ಸೈನಿ, ಮನೀಶ್ ಸೈನಿ ಮತ್ತು ಆಕಾಶ್ ಸೈನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ…

Read More

ಸಂಧಾನಕ್ಕೆ ಹೊಸ ತಿರುವು: ಅಮೆರಿಕ ಜೊತೆ ಶಾಂತಿ ಮಾತುಕತೆಗೆ ಇರಾನ್ ಮುಂದಾಳಿ

ಟೆಹ್ರಾನ್‌ನಿಂದ ದೊಡ್ಡ ಬೆಳವಣಿಗೆ…ಅಮೆರಿಕ ಜೊತೆಗಿನ ಸಂಘರ್ಷದ ನಡುವೆ ಇರಾನ್ ಹೊಸ ಶಾಂತಿ ಪ್ರಸ್ತಾವನೆ ಮುಂದಿಟ್ಟಿದೆ. ಪಾಕಿಸ್ತಾನದ ಮೂಲಕ ಈ ಪ್ರಸ್ತಾವನೆ ರವಾನೆಯಾಗಿದ್ದು,ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯಲು ಸಿದ್ಧ ಎಂದು ಇರಾನ್ ಘೋಷಿಸಿದೆ. ಆದರೆ, ಆರ್ಥಿಕ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಅಮೆರಿಕಗೆ ಷರತ್ತು ಹಾಕಲಾಗಿದೆ. ಇನ್ನೊಂದೆಡೆ, ಪರಮಾಣು ಕಾರ್ಯಕ್ರಮದ ವಿಚಾರವನ್ನು ತಾತ್ಕಾಲಿಕವಾಗಿ ಬದಿಗಿಟ್ಟು,ಮುಂದಿನ ಹಂತದಲ್ಲಿ ಚರ್ಚೆ ನಡೆಸುವ ತಂತ್ರವನ್ನು ಇರಾನ್ ಅನುಸರಿಸಿದೆ. ಈ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉನ್ನತ ಮಟ್ಟದ ಸಭೆ ಕರೆದಿದ್ದು,ಈ ಪ್ರಸ್ತಾವನೆಗೆ ಹೇಗೆ ಪ್ರತಿಕ್ರಿಯೆ…

Read More

ಕರ್ನಾಟಕದಲ್ಲಿ ಉರಿಯುತ್ತಿರುವ ಬಿಸಿಲು: ಕೋಳಿಗಳ ಸಾವು, ಕೆರೆಯಲ್ಲಿ ಮೀನುಗಳ ಮಾರಣಹೋಮ!

ಕರ್ನಾಟಕದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಕ್ಕುಟೋದ್ಯಮ, ಮೀನುಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಕೋಳಿಗಳ ಸಾವು ಹಾಗೂ ಕೆರೆಗಳಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Read More

‘ಪಪ್ಪು’ ಅನ್ನೋದ್ರಲ್ಲಿ ತಪ್ಪಿಲ್ಲ: ರಾಹುಲ್ ವಿರುದ್ಧ ಕುನಾಲ್ ಘೋಷ್ ತೀವ್ರ ವಾಗ್ದಾಳಿ

ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಟಿಎಂಸಿ ಹಿರಿಯ ನಾಯಕ ಕುನಾಲ್ ಘೋಷ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಘೋಷ್, ಮಹಾರಾಷ್ಟ್ರ, ದೆಹಲಿ, ಹರಿಯಾಣ ಮತ್ತು ಬಿಹಾರ ರಾಜ್ಯಗಳಲ್ಲಿ ಬಿಜೆಪಿ ಗೆಲುವು ತಡೆಯುವಲ್ಲಿ ಅವರು ವಿಫಲರಾದರು ಎಂದು ಟೀಕಿಸಿದರು. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಬಲವಾಗಿರುವ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವುದು ಮತ ವಿಭಜನೆಗೆ ಕಾರಣವಾಗುತ್ತಿದೆ. ಇದರಿಂದ ಬಿಜೆಪಿ…

Read More

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮಹತ್ವದ ಹೆಜ್ಜೆಯೊಂದನ್ನು ಶಿಕ್ಷಣ ಇಲಾಖೆ ಇಟ್ಟಿದೆ. ಇನ್ನುಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಾರ್ಥನೆ ಮುಗಿದ ತಕ್ಷಣ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ವಿದ್ಯಾರ್ಥಿಗಳಿಗೆ ನ್ಯೂಸ್ ಪೇಪರ್ ಓದಿಸುವಂತೆ ಸೂಚಿಸಲಾಗಿದೆ. ಈ ನಿಯಮವು ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ ಎಲ್ಲ ಶಾಲೆಗಳಿಗೆ ಅನ್ವಯವಾಗಲಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಈ…

Read More