ತುಮಕೂರಿನಲ್ಲಿ 32 ನವಿಲುಗಳ ದುಃಖದ ಸಾವು | ಹೀಟ್‌ಸ್ಟ್ರೋಕ್ ಶಂಕೆ

ತುಮಕೂರು ಜಿಲ್ಲೆಯಲ್ಲಿ ಆತಂಕಕಾರಿ ಘಟನೆ ವರದಿಯಾಗಿದೆ. ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ ಮತ್ತು ಹುಲ್ಲೆನಹಳ್ಳಿ ಗ್ರಾಮಗಳಲ್ಲಿ ಏಪ್ರಿಲ್ 16ರಿಂದ 21ರವರೆಗೆ ಒಟ್ಟು 32 ನವಿಲುಗಳು ಸಾವನ್ನಪ್ಪಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ತೀವ್ರ ಬಿಸಿಲಿನ ಹೊಡೆತದಿಂದ ಈ ನವಿಲುಗಳು ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

Read More

ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ವಿದ್ಯಾರ್ಥಿನಿಯರ ಮೇಲೆ ಅಚ್ಚರಿಯ ಘಟನೆ ನಡೆದಿದೆ.

ಸಿಇಟಿ ಪರೀಕ್ಷೆ (CET Exam) ವೇಳೆ ಬೆಳಗಾವಿ ಸೇರಿದಂತೆ ಹಲವಾರು ಪರೀಕ್ಷಾ ಕೇಂದ್ರಗಳಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರ ತೀವ್ರ ತಪಾಸಣೆ ನಡೆಸಿದ ಸಿಬ್ಬಂದಿ, ಕೆಲ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ನಂತರವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಿರುವುದು ಆಘಾತಕ್ಕೆ ಕಾರಣವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಬಾರಿ ಮೊದಲ ಬಾರಿಗೆ ಕಡ್ಡಾಯ ವಸ್ತ್ರ ಸಂಹಿತೆ ಜಾರಿಗೆ ತಂದಿದ್ದು, ಅದರ ಭಾಗವಾಗಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ…

Read More

IPL 2026: ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ಪ್ರೇಮ್ ದೇವಿ ನಿಧನ – ಟಾಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಲಿಲ್ಲ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬೌಲರ್ ಮುಖೇಶ್ ಚೌಧರಿ ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಅವರ ತಾಯಿ ಪ್ರೇಮ್ ದೇವಿ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮುಂಬೈನ ಟಾಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ (ಏ.21) ಅವರು ನಿಧನರಾಗಿದ್ದಾರೆ. ಕುಟುಂಬ ಹಾಗೂ ಕ್ರಿಕೆಟ್ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.

Read More

ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ..! ರಾಜ್ಯದಾದ್ಯಂತ ಚರ್ಚೆಗೆ ಗ್ರಾಸ.

ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ ಈ ದುರ್ಘಟನೆ ನಡೆದಿದೆ. ಅಮೆರಿಕದ ವಾಷಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು “ದೇವಿ ವಿಲ್ಲಾ” ಹೋಂಸ್ಟೇಯಲ್ಲಿ ವಾಸವಾಗಿದ್ದ ವೇಳೆ, ಅಲ್ಲಿ ಕೆಲಸ ಮಾಡುತ್ತಿದ್ದ ಝಾರ್ಖಂಡ್ ಮೂಲದ ವ್ರಿಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೂರು ಪ್ರಕಾರ, ಆರೋಪಿಯು ಮಹಿಳೆಗೆ ಮದ್ಯದಲ್ಲಿ ಮದ್ದು ಹಾಕಿ ಕುಡಿಸಿ ನಂತರ ಅತ್ಯಾಚಾರ…

Read More

ಬೆಳಗಾವಿಯಲ್ಲಿ ಕ್ರೂರ ಘಟನೆ: ನೈಟಿ ಧರಿಸಿದ್ದಕ್ಕೆ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ!

ಬೆಳಗಾವಿ ಜಿಲ್ಲೆಯ ಖಾನಾಪೂರದ ನಂದಗಡದಲ್ಲಿ ಪತ್ನಿ ನೈಟಿ ಧರಿಸಿದ್ದಕ್ಕೆ ಪತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. 80% ಸುಟ್ಟ ಗಾಯಗಳಿಂದ ಮಂಜುಳಾ ಪಾಟೀಲ್‌ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ: ₹1.70 ಲಕ್ಷ ಲಂಚ ಪಡೆಯುತ್ತಿದ್ದ PSI & ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಅರೆಸ್ಟ್!

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಪ್ರಕರಣ ಬಯಲಾಗಿದೆ. ಸಾರ್ವಜನಿಕರ ಸೇವೆಗೆ ನೇಮಕವಾಗಿರುವ ಪೊಲೀಸರು ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಪಿಎಸ್‌ಐ ಭೀಮಪ್ಪ ರಬಕವಿ ಮತ್ತು ಕಾನ್‌ಸ್ಟೇಬಲ್ ಸಂತೋಷ್ ಬಿರಾದಾರ ಅವರು ಮುತ್ತಪ್ಪ ನಾಯ್ಕರ್ ಎಂಬುವವರ ಮೇಲೆ ಇಸ್ಪೀಟ್ ಮತ್ತು ಬಡ್ಡಿ ದಂಧೆ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿದ್ದರೆಂಬ ಆರೋಪ ಕೇಳಿಬಂದಿದೆ. ಪ್ರಕರಣದಿಂದ ಹೆಸರು ಕೈಬಿಡಲು ಮತ್ತು ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು…

Read More

ಟಾಕ್ಸಿಕ್ ಕಥೆ ರಿವೀಲ್ ಮಾಡಿದ ಯಶ್: ಗೋವಾ-ಪೋರ್ಚುಗೀಸ್ ಸಮರ, ತಂದೆ-ಮಗನ ರಿವೇಂಜ್ ಡ್ರಾಮಾ!

ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಕಥಾಹಂದರ ಇದೀಗ ಸಿನಿಪ್ರಿಯರಲ್ಲಿ ಹೊಸ ಕುತೂಹಲ ಹುಟ್ಟಿಸಿದೆ. ಸಾಮಾನ್ಯ ಮಾಸ್ ಕಥೆಗಳನ್ನು ಮೀರಿ, ವಿಭಿನ್ನ ಕಾಲಘಟ್ಟವನ್ನು ಹಿನ್ನೆಲೆಯಾಗಿ ತೆಗೆದುಕೊಂಡಿರುವುದು ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ಯಶ್ ನೀಡಿರುವ ಮಾಹಿತಿ ಪ್ರಕಾರ, ಟಾಕ್ಸಿಕ್ ಒಂದು ತಂದೆ–ಮಗ ಸಂಬಂಧದ ಮೇಲೆ ಆಧಾರಿತ ಪ್ರತೀಕಾರದ ಕಥೆ. ಆದರೆ ಇದು ಕೇವಲ ರಿವೇಂಜ್ ಡ್ರಾಮಾ ಮಾತ್ರವಲ್ಲ. ಭಾವನೆ, ಬಾಂಧವ್ಯ ಮತ್ತು ನೋವಿನ ಆಳವನ್ನು ಒಳಗೊಂಡ ಗಾಢ ಕಥಾಹಂದರ ಇದರಲ್ಲಿ…

Read More

ಭೀಕರ ಅಪಘಾತ: ಹುಡುಗಿ ನೋಡಲು ಹೊರಟ ಕುಟುಂಬ ಸೇರಿದ್ದು ಮಸಣಕ್ಕೆ – 4 ಸಾವು, 21 ಮಂದಿಗೆ ಗಾಯ

ವಿಜಯನಗರ ಜಿಲ್ಲೆಯಲ್ಲಿ ಹೃದಯ ಕಲುಕುವ ಭೀಕರ ರಸ್ತೆ ಅಪಘಾತ.. ಹೊಸಪೇಟೆಯ ಹೊರವಲಯದಲ್ಲಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಕನ್ಯೆ ನೋಡಲು ಸಂತೋಷವಾಗಿ ಹೊರಟಿದ್ದ ಕುಟುಂಬ.ಕ್ಷಣಾರ್ಧದಲ್ಲಿ ಮಸಣ ಸೇರಿರುವ ದುರ್ಘಟನೆ ಇದು. ಹೌದು.. ಕಿತ್ನೂರು ಗ್ರಾಮದ 28 ವರ್ಷದ ಕೊಟ್ರೇಶ್, ಮದುವೆ ಮಾತುಕತೆಗೆ ಗಂಗಾವತಿ ಕಡೆ ಹೊರಟಿದ್ದ. ಆತನ ಜೊತೆ ತಾಯಿ ಸುಜಾತ (34), ತಂದೆ ನಾಗಪ್ಪ (58) ಸಹ ಪ್ರಯಾಣಿಸುತ್ತಿದ್ದರು. ಆದರೆ ಡಣಾಪುರದ ಬಳಿ ಯಮಸ್ವರೂಪಿಯಾಗಿ ಬಂದ ಲಾರಿಯೊಂದು. ಅವರ…

Read More

ಅವನ್ನ ಬಿಟ್ಟು ಇವನ ಜೊತೆ ಪ್ರೀತಿ..ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮಟಾಶ್..!

ಅಮೃತಾ ಕೊಲೆ ಆರೋಪಿ ಪ್ರಿಯಕರ ಸಿದ್ದೇಶ್ (32) ಎಡಭಾಗ, ಅಮೃತಾ ಮದ್ಯಭಾಗ ಕೊಲೆಯಾದ ವ್ಯಕ್ತಿ ಜವರಪ್ಪ ಬಲಭಾಗ ಮೈಸೂರು ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಕ್ರೈಂ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು, ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿಸಿದ ಶಾಕ್ ಘಟನೆ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ. ಹೌದು… ಕುರ್ಣೇಗಾಲ ನಿವಾಸಿ ಜವರಪ್ಪ ಈ ಕ್ರೂರ ಹತ್ಯೆಗೆ ಬಲಿಯಾದ ವ್ಯಕ್ತಿ.ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ, ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32)…

Read More

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ಆಲ್ಕೋಹಾಲ್ ಆಧಾರಿತ ತೆರಿಗೆ – ಮದ್ಯದ ಬೆಲೆ 20% ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 19: ರಾಜ್ಯದ ಮದ್ಯಪ್ರಿಯರಿಗೆ ಶಾಕ್ ನೀಡುವ ಬೆಳವಣಿಗೆಯಾಗಿ, ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಈ ಸಂಬಂಧ ಕರಡು ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದ್ದು, ಇದು ಜಾರಿಯಾದರೆ ಮದ್ಯದ ಬೆಲೆಗಳಲ್ಲಿ ಗಣನೀಯ ಏರಿಕೆ ಆಗುವ ಸಾಧ್ಯತೆ ಇದೆ. ಹೊಸ ನಿಯಮದ ಪ್ರಕಾರ, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣ (Alcohol In Beverage – AIB) ಹೆಚ್ಚಾದಷ್ಟೂ ಅದರ ಮೇಲೆ ವಿಧಿಸುವ ತೆರಿಗೆಯೂ ಹೆಚ್ಚಾಗಲಿದೆ. ಇದರ ಪರಿಣಾಮವಾಗಿ…

Read More