SSLC ಫಲಿತಾಂಶ ದಿನವೇ ಡಬಲ್ ದುರಂತ: ಫೇಲ್ ಆದ ವಿದ್ಯಾರ್ಥಿ ಆತ್ಮಹತ್ಯೆ, ಪಾಸ್ ಆದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು

ಚಿತ್ರದುರ್ಗ (ಏ.26): ಎಸ್ಎಸ್‌ಎಲ್‌ಸಿ (SSLC) ಫಲಿತಾಂಶ ಪ್ರಕಟವಾದ ದಿನವೇ ರಾಜ್ಯದಲ್ಲಿ ಎರಡು ಹೃದಯವಿದ್ರಾವಕ ಘಟನೆಗಳು ಬೆಳಕಿಗೆ ಬಂದಿವೆ. ಚಿತ್ರದುರ್ಗದಲ್ಲಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಹೊರಪೇಟೆ ಪ್ರದೇಶದ ಡಾನ್ ಬೋಸ್ಕೋ ಶಾಲೆಯ ವಿದ್ಯಾರ್ಥಿ ಅಯಾನ್ ಬೇಗ್ (16) ನೇಣು ಬಿಗಿದುಕೊಂಡು ಜೀವ ಅಂತ್ಯಗೊಳಿಸಿದ್ದಾನೆ. ಫಲಿತಾಂಶ ಪ್ರಕಟವಾದ ಕೆಲವೇ ಹೊತ್ತಿನಲ್ಲಿ ಈ ದುರ್ಘಟನೆ ನಡೆದಿರುವುದು ಕುಟುಂಬದವರನ್ನು ಶೋಕ ಸಾಗರಕ್ಕೆ ತಳ್ಳಿದೆ. ಇನ್ನೊಂದೆಡೆ, ಕೋಲಾರ ಜಿಲ್ಲೆಯಲ್ಲಿ ಪಾಸ್ ಆದ ಖುಷಿಯಲ್ಲಿ ಸ್ನೇಹಿತರೊಂದಿಗೆ…

Read More

SSLC ತೃತೀಯ ಭಾಷೆ ವಿವಾದಕ್ಕೆ ಹೈಕೋರ್ಟ್ ತೀರ್ಪು: ಗ್ರೇಡ್ ಬದಲು ಅಂಕಗಳೇ ನೀಡಲು ಸರ್ಕಾರಕ್ಕೆ ಸೂಚನೆ..!

‌ಕರ್ನಾಟಕ ಹೈಕೋರ್ಟ್ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ತೃತೀಯ ಭಾಷೆ ವಿಷಯಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಅಂಕಗಳನ್ನೇ ನೀಡಬೇಕು ಎಂದು ನಿರ್ದೇಶನ ನೀಡಿದೆ. ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿದಂತೆ ಮೂವರು ವಿದ್ಯಾರ್ಥಿಗಳು ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ…

Read More